36 C
Hubli
ಮೇ 2, 2024
eNews Land
ಅಪರಾಧ ಸುದ್ದಿ

ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತಿ ಸದಸ್ಯ ಭೀಕರ ಹತ್ಯೆ: ಲವ್ ಕಂ ರಾಜಕೀಯ ದ್ವೇಷ ಕಾರಣ ?

ಇಎನ್ಎಲ್ ಹುಬ್ಬಳ್ಳಿ:

ರಾಜಕೀಯ, ಪ್ರೇಮಿಸಿ ವಿವಾಹವಾದ ಕಾರಣಕ್ಕಾಗಿ ಹಳೇ ಹುಬ್ಬಳ್ಳಿ ವ್ಯಾಪ್ತಿಯ ರಾಯನಾಳ ಗ್ರಾಮ ಪಂಚಾಯಿತಿ ಸದಸ್ಯನನ್ನು ತಲವಾರ್, ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಲಾಗಿದೆ.

ರಾಯನಾಳ ಗ್ರಾಪಂ ಗಂಗಿವಾಳ ವಾರ್ಡ್’ನ ಬಿಜೆಪಿ ಬೆಂಬಲಿತ ಸದಸ್ಯ ದೀಪಕ ಶಿವಾಜಿ ಪಟಾದಾರಿ ಎಂಬಾತನನ್ನು (32) ಚಾಕು, ತಲ್ವಾರ್ ನಿಂದ ಹೊಡೆದ ದುಷ್ಕರ್ಮಿಗಳು ಗಂಭೀರ ಗಾಯಗೊಳಿಸಿದ್ದರು. ಸ್ಥಳೀಯರು ಆತನನ್ನು ತಕ್ಷಣ ಕಿಮ್ಸ್ ಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

ಪ್ರವೀಣ್ ಮುದಲಿಂಗನವರ, ಯಲ್ಲಪ್ಪ ಮೇಟಿ, ರುದ್ರಪ್ಪ ಮೇಟಿ, ಮಲ್ಲಿಕಾರ್ಜುನ ಮೇಟಿ, ಶಿವು ಮೇಟಿ ಆರೋಪಿಗಳು. ಇವರಲ್ಲಿ ಕೆಲವರನ್ನು ಪೊಲೀಸರು ತಂಡ ರಾತ್ರಿಯೇ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಒಂದೂವರೆ ವರ್ಷದ ಹಿಂದೆ ಮೇಟಿ ಕುಟುಂಬದ ಯುವತಿಯನ್ನು ದೀಪಕ ವಿವಾಹ ಆಗಿದ್ದ ಎನ್ನಲಾಗಿದೆ. ಅಲ್ಲದೆ, ಈಚೆಗೆ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಮೇಲಿನ ಅವಿಶ್ವಾಸ ನಿರ್ಣಯದಲ್ಲಿ ಪಾಲ್ಗೊಂಡಿದ್ದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ ಎಂದು ಸಂಬಂಧಿಕರು, ಸ್ನೇಹಿತರು ವ್ಯಕ್ತಪಡಿಸಿದ್ದಾರೆ.

ಮೃತನ ಸಹೋದರ ಸಂಜಯ ಪಟಾದಾರಿಯಿಂದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಹುಬ್ಬಳ್ಳಿ ಕಂಜಾರ ಬಾಟ್ ಮತ್ತು ಚಪ್ಪರಬಂದನಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ

eNEWS LAND Team

ಕುಂದಗೋಳ ಮಾಜಿ ಶಾಸಕ ಎಮ್.ಎಸ್.ಅಕ್ಕಿ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ!!! ಮನವಿ ಮಾಡಿದ್ದು ಯಾರಿಗೆ? ಯಾರು? ಇಲ್ಲಿದೆ ನೋಡಿ!!!

eNewsLand Team

ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ-2022. ಜಿಲ್ಲೆಯ 21 ಮತಗಟ್ಟೆಗಳ ಮಾಹಿತಿ ಇಲ್ಲಿದೆ ನೋಡಿ

eNEWS LAND Team