32 C
Hubli
ಮೇ 6, 2024
eNews Land
ದೇಶ ಸುದ್ದಿ

ಹರ್ ಘರ್ ತಿರಂಗಾ ಅಭಿಯಾನ: ಭಾರತೀಯರು ಒಂದು ಎಂಬ ಸಂದೇಶ ಸಾರಬೇಕು: ಸಿಎಂ ಬೊಮ್ಮಾಯಿ

ಇಎನ್ಎಲ್ ಬೆಂಗಳೂರು: ಭಾರತೀಯರು ಒಂದು ಎಂಬ ಸಂದೇಶ ಸಾರುವುದು ಹರ್ ಘರ್ ತಿರಂಗಾ ಅಭಿಯಾನದ ಉದ್ದೇಶ. ಎಲ್ಲರೂ ಒಂದಾಗಿ, ಜಾತಿ ಮತ ಪಂಥ ಎಂಬ ಬೇಧವಿಲ್ಲದೆ ಸ್ವಾತಂತ್ರೋತ್ಸವವನ್ನು ಆಚರಿಸಬೇಕು ಎಂದು ಸಿಎಂ ಬೊಮ್ಮಾಯಿ ಇಂದು ಬೆಳಿಗ್ಗೆ ತಮ್ಮ ನಿವಾಸದ ಬಳಿ ಮಾಧ್ಯದವರೊಂದಿಗೆ ಮಾತನಾಡಿದರು.

ಹರ್ ಘರ್ ತಿರಂಗಾ ಅಭಿಯಾನ ಇಂದಿನಿಂದ ಪ್ರಾರಂಭವಾಗುತ್ತಿದೆ. ಹರ್ ಘರ್ ತಿರಂಗಾ ಮತ್ತು 75ನೇ ಸ್ವಾತಂತ್ರೋತ್ಸವದ ಆಚರಣೆ ಈಗಾಗಲೇ ಪ್ರಾರಂಭವಾಗಿದೆ.ಪ್ರತಿ ಊರಿನಲ್ಲೂ ಕೂಡ ಜಿಲ್ಲೆಗಳಲ್ಲಿ ಶಾಲಾ ಮಕ್ಕಳು, ವಿದ್ಯಾರ್ಥಿಗಳು, ಯುವಕರು ಧ್ವಜವನ್ನು ಹಿಡಿದು ಮೆರವಣಿಗೆ ಮಾಡಿದ್ದಾರೆ. ಇಡೀ ರಾಜ್ಯದಲ್ಲಿ ಹಬ್ಬದ ವಾತಾವರಣ, ಉತ್ಸಾಹವಿದೆ. ಇಂದಿನಿಂದ15 ರವರೆಗೆ ಪ್ರತಿ ಮನೆಯಲ್ಲಿ ಧ್ವಜ ಹಾರಾಡಬೇಕು ಎನ್ನುವುದು ನಮ್ಮ ಆಶಯ. ರಾಜ್ಯ ಸರ್ಕಾರ 1ಕೋಟಿ 8 ಲಕ್ಷ ಧ್ವಜಗಳನ್ನು ವಿತರಣೆ ಮಾಡಿದೆ. ಪ್ರತಿ ಗ್ರಾಮ ಪಂಚಾಯತ್ ನಲ್ಲಿ 400 ರಿಂದ 500 ಧ್ವಜ ವಿತರಿಸಲಾಗಿದೆ. ವಿವಿಧ ಸಂಘ ಸಂಸ್ಥೆಗಳೂ ಧ್ವಜ ವಿತರಣೆ ಮಾಡಿದ್ದು, 1 ಕೋಟಿ 20 ಲಕ್ಷ ಧ್ವಜ ಕರ್ನಾಟಕದಲ್ಲಿ ವಿತರಣೆಯಾಗಿದೆ. ಪ್ರತಿಯೊಬ್ಬರ ಮನೆ ಮೇಲೆ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಭಾರತೀಯರು ಒಂದು. ದೇಶಭಕ್ತರು ಭಾರತದ ಭವ್ಯ ಭವಿಷ್ಯಕ್ಕಾಗಿ ಸಂಕಲ್ಪ ಮಾಡಿದ್ದೇವೆ ಎಂದು ನಿರೂಪಿಸಬೇಕು ಎಂದರು.
75 ವರ್ಷ ಆತ್ಮಾವಲೋಕನ ಮತ್ತು ಸಿಂಹಾವಲೋಕನ ಮಾಡಿಕೊಳ್ಳಲು ಮಹತ್ವದ ಘಟ್ಟ. ಇನ್ನು 25 ವರ್ಷವನ್ನು ಅಮೃತ ಕಾಲ ಎಂದು ಪ್ರಧಾನಮಂತ್ರಿಗಳು ಕರೆದಿದ್ದಾರೆ. ಭಾರತವನ್ನು ಇನ್ನಷ್ಟು ಶಕ್ತಿಶಾಲಿಯಾಗಿ, ಸಂಪದ್ಭರಿತವಾಗಿಸಿ, ಭಾರತ್ ವಿಶ್ವಮಾನ್ಯವಾಗುವ ರೀತಿಯಲ್ಲಿ ಮಾಡುವ ಸಂಕಲ್ಪ ನಮ್ಮದು. ಅದೇ ರೀತಿ ಆಗಸ್ಟ್ 15 ರಂದು ಕೂಡ ವಿಜ್ರೃಂಭಣೆ
ಯಿಂದ ಆಚರಣೆ ಮಾಡಲಾಗುವುದು ಎಂದರು

Related posts

ವಿಧಾನಸಭಾ ಚುನಾವಣೆ ನಿಮಿತ್ಯ ಧಾರವಾಡ ಜಿಲ್ಲೆಗೆ ನಿಯೋಜಿತರಾದ ಸಾಮಾನ್ಯ ವೀಕ್ಷಕರ ವಿವರ ನೋಡಿ!

eNEWS LAND Team

NDA’s Presidential nominee Draupadi Murmu set to win with a huge majority: CM Bommai

eNEWS LAND Team

ಒಮಿಕ್ರೋನ್ + ಡೆಲ್ಟಾ: ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ; ಸಿಎಂ

eNewsLand Team