24 C
Hubli
ಮೇ 6, 2024
eNews Land
ರಾಜಕೀಯ

ರಾಜ್ಯದಲ್ಲಿ ಕಾರ್ಮಿಕರಿಗೆ ರೂ.97 ಕೋಟಿ ಸಹಾಯಧನ ಮಂಜೂರು ಕಾರ್ಮಿಕ ಸಚಿವ- ಶಿವರಾಂ ಹೆಬ್ಬಾರ

ಇಎನ್ಎಲ್ ಹಾವೇರಿ:

ಕೋವಿಡ್ ಸಂಕಷ್ಟ ಸಮಯದಲ್ಲಿ ಕಾರ್ಮಿಕರ ಹಿತದೃಷ್ಟಿಯಿಂದ ಆಹಾರ ಕಿಟ್ ವಿತರಿಸಲಾಗಿದೆ. ರಾಜ್ಯದಲ್ಲಿ ಕಾರ್ಮಿಕರಿಗೆ ರೂ.97 ಕೋಟಿ ಹಾಗೂ ಹಾವೇರಿ ಜಿಲ್ಲೆಗೆ ರೂ.31 ಕೋಟಿ ಸಹಾಯಧನ ನೀಡಲಾಗಿದೆ ಎಂದು ಕಾರ್ಮಿಕ ಸಚಿವರಾದ ಶಿವರಾಂ ಹೆಬ್ಬಾರ ಅವರು ಹೇಳಿದರು.
ಹಿರೇಕೆರೂರು ಪಟ್ಟಣದಲ್ಲಿ ಒಂದು ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಕಾರ್ಮಿಕ ಭವನದ ಕಾಮಗಾರಿಗೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಕೃಷಿ ಹಾಗೂ ಕಾರ್ಮಿಕರು ಒಂದೇ ನಾಣ್ಯದ ಎರಡು ಮುಖಗಳು ಇದ್ದಂತೆ. ಕಾರ್ಮಿಕರು ಮತ್ತು ಕೃಷಿಕರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.
ಕೃಷಿ ಸಚಿವರಾದ ಬಿ.ಸಿ.ಪಾಟೀಲ, ಜೀವಿಶಾಸ್ತ್ರ ಮತ್ತು ಪರಿಸರ, ಪ್ರವಾಸೋದ್ಯಮ ಸಚಿವ ಸಚಿವರಾದ ಆನಂದಸಿಂಗ್, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಇತರರು ಉಪಸ್ಥಿತರಿದ್ದರು

Related posts

ಕೋವಿಡ್ ಬಗ್ಗೆ ಜನತೆ ಗಾಬರಿಯಾಗಬೇಕಿಲ್ಲ ಲಾಕ್ ಡೌನ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ : ಸಿಎಂ

eNEWS LAND Team

ಒತ್ತಡ ನಿವಾರಣೆಗೆ ಸಿಎಂ ಬೊಮ್ಮಾಯಿ‌ ಏನು ಮಾಡ್ತಾರೆ? ಅವರೇನು ಹೇಳಿದ್ರು?

eNEWS LAND Team

ಮತ್ತೆ ಸಿಡಿದೆದ್ದ ರಾಜಾಹುಲಿ ಬಿಎಸ್ವೈ: 4ರಿಂದ ಬಿಜೆಪಿ ಹೋರಾಟ

eNewsLand Team