ಇಎನ್ಎಲ್ ಬಾಗಲಕೋಟೆ
ನಾನು ಮನೆಗೆ ಹೋಗುವ ಪ್ರಶ್ನೆಯೇ ಇಲ್ಲ. ನಾನೆಲ್ಲಿ ಹೋಗಿದ್ದೇನೆ. ವಿಧಾನ ಪರಿಷತ್ ಚುನಾವಣೆ ಬಳಿಕ ರಾಜ್ಯ ಸುತ್ತಿ ಪಕ್ಷವನ್ನು ಪುನಃ ಅಧಿಕಾರಕ್ಕೆ ತರುತ್ತೇನೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಬಿಜೆಪಿಗೆ ಯಡಿಯೂರಪ್ಪ ಅನಿವಾರ್ಯವಾಗಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನೆಲ್ಲಿ ಹೋಗಿದ್ದೇನೆ? ಪಕ್ಷವನ್ನು ಕಟ್ಟುವ ಸಲುವಾಗಿ ರಾಜ್ಯಾದ್ಯಂತ ಓಡಾಡಿ ಕೆಲಸ ಮಾಡುತ್ತಿದ್ದೇನೆ. ಆ ಬಗ್ಗೆ ಎರಡು ಮಾತಿಲ್ಲ, ಅನಿವಾರ್ಯ ಅನ್ನುವ ಮಾತಿಲ್ಲ.
ಸಾಮೂಹಿಕ ನೇತೃತ್ವದಲ್ಲಿ ನಾನು ಕೂಡಾ ಓಡಾಡಿ ಕೆಲಸ ಮಾಡುತ್ತೇನೆ. ನಮ್ಮದು ಸ್ಪಷ್ಟವಾದ ಸಂಕಲ್ಪ. ಮುಂದಿನ ಎಲೆಕ್ಷನ್ ನಲ್ಲಿ ೧೪೦ಕ್ಕೂ ಹೆಚ್ಚಿನ ಸ್ಥಾನ ಗೆದ್ದು ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ ಎಂದರು.
ವಿಧಾನ ಪರಿಷತ್ ಚುನಾವಣೆ ಮುಗಿದ ಬಳಿಕ ಮತ್ತೆ ಪ್ರವಾಸ ಕೈಗೊಳ್ಳುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.