ಇಎನ್ಎಲ್ ದೆಹಲಿ: ಪ್ರಸಕ್ತ ವರ್ಷ ಸಂಭವಿಸಿದ ಭಾರೀ ಮಳೆ, ಪ್ರವಾಹ ಮತ್ತು ಭೂಕುಸಿತದ ಪರಿಣಾಮ ರಾಷ್ಟ್ರದಲ್ಲಿ ಅತಿ ಹೆಚ್ಚು ಕರ್ನಾಟಕದಲ್ಲಿ 13.98 ಸೇರಿ ಒಟ್ಟಾರೆ ದೇಶದಲ್ಲಿ 50.40 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಬೆಳೆದ ಬೆಳೆಗಳು ಹಾನಿಗೀಡಾಗಿದೆ ಎಂದು ಕೇಂದ್ರ ಲೋಕಸಭೆಗೆ ಮಾಹಿತಿ ನೀಡಿದೆ.
ಈ ಕುರಿತು ಮಂಗಳವಾರ ಲೋಕಸಭೆಗೆ ಲಿಖಿತ ಉತ್ತರ ನೀಡಿರುವ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ನಂತರದ ಸ್ಥಾನದಲ್ಲಿ ಪಶ್ಚಿಮ ಬಂಗಾಳದಲ್ಲಿ 6.90 ಲಕ್ಷ ಹೆಕ್ಟೇರ್, ರಾಜಸ್ಥಾನದಲ್ಲಿ 6.79 ಲಕ್ಷ ಹೆಕ್ಟೇರ್, ಬಿಹಾರದಲ್ಲಿ 5.80 ಲಕ್ಷ ಹೆಕ್ಟೇರ್, ಮಹಾರಾಷ್ಟ್ರದಲ್ಲಿ 4.55 ಲಕ್ಷ ಹೆಕ್ಟೇರ್ ಮತ್ತು ಉತ್ತರ ಪ್ರದೇಶದಲ್ಲಿ 3,61 ಲಕ್ಷ ಹೆಕ್ಟೇರ್ ಬೆಳೆಗಳಿಗೆ ಹಾನಿಯಾಗಿದೆ ಎಂದು ತಿಳಿಸಿದ್ದಾರೆ.