29 C
Hubli
ಮೇ 3, 2024
eNews Land
ಸುದ್ದಿ

ಡಿ. 18 ರಂದು ಮೆಗಾ ಲೋಕ ಅದಾಲತ್

ಇಎನ್ಎಲ್ ಧಾರವಾಡ

ಜಿಲ್ಲೆಯಾದ್ಯಂತ ಇರುವ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಡಿ. 18 ರಂದು ಶನಿವಾರದಂದು “ಮೆಗಾ ಲೋಕ ಅದಾಲತ್” ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಉಮೇಶ ಅಡಿಗ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಲೋಕ ಅದಾಲತ್‍ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ, ರಾಜಿ ಆಗಬಹುದಾದ ಎಲ್ಲ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳು, ವಿದ್ಯುತ್ ಮಂಡಳಿ ಮುಂತಾದ ಸ್ಥಳೀಯ ಸಂಸ್ಥೆಗಳ ಪರ ಮತ್ತು ವಿರುದ್ಧ ದಾಖಲಾದ ಪ್ರಕರಣಗಳು, ಬ್ಯಾಂಕುಗಳಿಗೆ ಸಂಬಂಧಿಸಿದ ಪ್ರಕರಣಗಳು, ವೈವಾಹಿಕ ಅಥವಾ ಜೀವನಾಂಶ ಪ್ರಕರಣಗಳು, ಕಾನೂನಿನನ್ವಯ ರಾಜೀ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಕಾರ್ಮಿಕ ನಷ್ಟ ಪರಿಹಾರ ಪ್ರಕರಣಗಳು, ರಾಜಿ ಆಗಬಹುದಾದ ಎಲ್ಲಾ ತರಹದ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು. ಬ್ಯಾಂಕ್, ಕಾರ್ಮಿಕರು, ನೀರು ಮತ್ತು ವಿದ್ಯುತ್‍ಗೆ ಸಂಬಂಧಿಸಿದ ವ್ಯಾಜ್ಯಪೂರ್ವ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಸಾರ್ವಜನಿಕರು ವಿಶೇಷವಾಗಿ ಕಕ್ಷಿಗಾರರು ಹೆಚ್ಚಿನ ಸಂಖ್ಯೆಯಲ್ಲಿ ಲೋಕ ಅದಾಲತ್‍ನ ಸದುಪಯೋಗಪಡಿಸಿಕೊಳ್ಳಬೇಕು ಎಂದು ಕೋರಿದ್ದಾರೆ.

Related posts

ಹುಬ್ಬಳ್ಳಿಯಲ್ಲಿ ಬ್ಯಾಂಕ್ ನೌಕರರ ಮುಷ್ಕರ: ಗ್ರಾಹಕರ ಪರದಾಟ

eNEWS LAND Team

ಜಿಲ್ಲೆಯ ತಾಲೂಕುಗಳಲ್ಲಿ ಗ್ರಾಮ ವಾಸ್ತವ್ಯ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ

eNEWS LAND Team

ಬಿಎಸ್’ವೈ ಜಲರಕ್ಷಣೆ ನೀಡಿದ ಆಧುನಿಕ ಭಗೀರಥ: ಸಿಎಂ ಬೊಮ್ಮಾಯಿ

eNEWS LAND Team