22 C
Hubli
ಮೇ 4, 2024
eNews Land
ರಾಜ್ಯ

ಬೆಳಗಾವಿಯಲ್ಲಿ ಪುಂಡಾಟಿಕೆ ಘಟನೆ ಖಂಡಿಸಿದ ಮುಖ್ಯ ಮಂತ್ರಿ ಬೊಮ್ಮಾಯಿ‌

ಇಎನ್ಎಲ್ ಧಾರವಾಡ

ಬೆಳಗಾವಿಯಲ್ಲಿ ನಿನ್ನೆ ರಾತ್ರಿ ನಡೆದ ಪುಂಡಾಟಿಕೆಯನ್ನು ಖಂಡಿಸುತ್ತೇನೆ. ಆ ಪುಂಡರನ್ನು ಸೆದೆ ಬಡಿಯುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಗೃಹ ಸಚಿವರಿಗೆ ಸೂಚಿಸಿದ್ದೇನೆ. ಅವರೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಈಗಾಗಲೇ ಕೆಲವರನ್ನು ಬಂಧಿಸಲಾಗಿದೆ. ಕಲ್ಲು ತೂರಾಟ ಮಾಡುವುದು , ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾಗೂ ಸರ್ಕಾರಿ ವಾಹನಗಳಿಗೆ ಹಾನಿ ಉಂಟುಮಾಡುವುದು ಕಾನೂನು ಬಾಹಿರ. ಇಂಥ ಘಟನೆ ಪುನಃ ಜರುಗದಂತೆ ಇನ್ನಷ್ಟು ಕಠಿಣ ಹಾಗೂ ದೀರ್ಘಾವಧಿ ಕ್ರಮಗಳನ್ನು ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಈ ಪ್ರವೃತ್ತಿ ಸರಿಯಲ್ಲ ಎಂದರು.

ರಾಷ್ಟ್ರಭಕ್ತರ ಪ್ರತಿಮೆ ಭಗ್ನಗೊಳಿಸುವುದು ದೇಶಭಕ್ತರ ಕೆಲಸವಲ್ಲ. ದೇಶಭಕ್ತರು ಎಲ್ಲಾ ಸಮುದಾಯಕ್ಕೆ ಸೇರಿದವರು. ದೇಶಕ್ಕಾಗಿ ತ್ಯಾಗ ಮಾಡಿದವರು. ಪ್ರತಿಮೆ ಸ್ಥಾಪಿಸುವುದು ಅವರನ್ನು ಗೌರವಿಸಬೇಕೆಂದೇ ವಿನಃ ಅವರ ಮುಖಾಂತರ ಸಮಾಜದಲ್ಲಿ ಕ್ಷೋಭೇ ಉಂಟುಮಾಡುವುದಲ್ಲ. ಈ ವರ್ತನೆ ಎಳ್ಳಷ್ಟೂ ಸರಿಯಲ್ಲ. ಕೆಲವು ಪುಂಡರು ಈ ರೀತಿ ಮಾಡುತ್ತಿದ್ದು ಅವರನ್ನು ಸದೆ ಬಡಿಯಲಾವುದು. ಇದು ಉದ್ದೇಶಪೂರ್ವಕವೇ ಎನ್ನುವ ಬಗ್ಗೆ ತನಿಖೆ ನಡೆಸಲಾಗುವುದು ಎಂದರು.

Related posts

ಗಡಿ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಕಟ್ಟೆಚ್ಚರ : ಮುಖ್ಯಮಂತ್ರಿ ಬೊಮ್ಮಾಯಿ

eNEWS LAND Team

ಸಮಯ ಪ್ರಜ್ಞೆಯಿಂದ ಅವಘಡ ತಪ್ಪಿಸಿದ ಬಸ್ ಚಾಲಕ

eNEWS LAND Team

ರಾಯಣ್ಣನ ಹೆಸರಿನಲ್ಲಿ 180 ಕೋಟಿ ರು. ವೆಚ್ಚದಲ್ಲಿ ವೆಚ್ಚದಲ್ಲಿ ಮಿಲಿಟರಿ ಶಾಲೆ : ಮುಖ್ಯ ಮಂತ್ರಿ  ಬೊಮ್ಮಾಯಿ

eNewsLand Team