22 C
Hubli
ಮೇ 5, 2024
eNews Land
ಸುದ್ದಿ

ಇಂಚಲ-ಮರಕುಂಬಿ ರಸ್ತೆ ನಿರ್ಮಾಣಕ್ಕೆ ಪ್ರಸ್ತಾವನೆ: ಸಚಿವ ಕೆ.ಎಸ್.ಈಶ್ವರಪ್ಪ

ಇಎನ್ಎಲ್ ಬೆಳಗಾವಿ ಸುವರ್ಣ ಸೌಧ:

ಬೈಲಹೊಂಗಲ ಮತಕ್ಷೇತ್ರದ ವ್ಯಾಪ್ತಿಗೆ ಬರುವ ಸವದತ್ತಿ ತಾಲೂಕಿನ ಇಂಚಲ-ಮರಕುಂಬಿ 5 ಕಿ.ಮೀ. ಗ್ರಾಮೀಣ ರಸ್ತೆಯನ್ನು 1.65 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಕಂದಾಯ ಮತ್ತು ಆರ್ಥಿಕ ಇಲಾಖೆಗೆ ಪ್ರಸ್ತಾವಣೆ ಸಲ್ಲಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಹೇಳಿದರು.
ವಿಧಾನ ಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಇಂದು ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ ಅವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. ಬೆಳಗಾವಿ ಜಿಲ್ಲೆ ಬೈಲಹೊಂಗಲದ ಮತಕ್ಷೇತ್ರದ ಸವದತ್ತಿ ತಾಲೂಕಿನ ಇಂಚಲ-ಮರಕುಂಬಿ 5 ಕಿ.ಮಿ. ರಸ್ತೆಯು ಮಳೆಯಿಂದ ಹಾಳಾಗಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿರುವದು ಸರಕಾರದ ಗಮನಕ್ಕೆ ಬಂದಿದ್ದು ಈ ರಸ್ತೆಯನ್ನು ಅಭಿವೃದ್ಧಿಪಡಿಸಲು ಸುಮಾರು 1.65 ಕೋಟಿ ರೂ. ಅನುದಾನದ ಅವಶ್ಯಕತೆವಿರುತ್ತದೆ. 2020-21ನೇ ಸಾಲಿನಲ್ಲಿ ಲಿಂಕ್ ಡಾಕ್ಯೂಮೆಂಟರಡಿ 3 ಲಕ್ಷ ರೂ.ಗಳ ಮೊತ್ತದಲ್ಲಿ ಮೇಲಿನ ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿಪಡಿಸಲಾಗಿದೆ. ಅಲ್ಲದೇ ಈ ಇಂಚಲ-ಮರಕುಂಬಿ ರಸ್ತೆ ಒಳಗೊಂಡಂತೆ ಮಳೆಯಿಂದ ಹಾನಿಗೊಳಗಾಗಿರುವ ರಸ್ತೆ ಮತ್ತು ಸೇತುವೆಗಳ ದುರಸ್ತಿಗೆ ಅನುದಾನವನ್ನು ಒದಗಿಸುವಂತೆ ಕಂದಾಯ ಮತ್ತು ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು ಅನುದಾನ ಲಭ್ಯವಾದ ನಂತರ ಕಾಮಗಾರಿಯನ್ನು ಕೈಗೊಳ್ಳಲಾಗುವದು ಎಂದು ತಿಳಿಸಿದರು.

Related posts

ವಿಪ: ಮೋದಿ- ದೇವೇಗೌಡ‌ ಜುಗಲ್ ಬಂದಿ ?

eNewsLand Team

ಕೆಲವು ರೈಲುಗಳ ಸೇವೆಯಲ್ಲಿ ಬದಲಾವಣೆ CHANGE IN PATTERN OF TRAIN SERVICES

eNewsLand Team

ಹುಬ್ಬಳಿ ಮೂರಸಾವಿರಮಠ: ಮಜೇಥಿಯಾ ಫೌಂಡೇಶನ್ ವತಿಯಿಂದ 300 ಜನರಿಗೆ ಕೃತಕ ಕಾಲು ಜೋಡಣೆ

eNewsLand Team