33 C
Hubli
ಏಪ್ರಿಲ್ 28, 2024
eNews Land
ರಾಜ್ಯ ಸುದ್ದಿ

ಹೊಸ ವರ್ಷಾಚರಣೆಯ ಗುಂಗಿನಲ್ಲಿ ಇದ್ದವರಿಗೆ ರಾಜ್ಯ ಸರ್ಕಾರ ಶಾಕ್! ನೈಟ್ ಕರ್ಫ್ಯೂ ಮತ್ತೆ ಜಾರಿ

ಇಎನ್ಎಲ್ ಬೆಂಗಳೂರು: ಒಮಿಕ್ರೋನ್ ಭೀತಿ ಹಿನ್ನೆಲೆಯಲ್ಲಿ ಡಿ. 28ರಿಂದ ಹತ್ತು ದಿನ ರಾತ್ರಿ ಕರ್ಫ್ಯೂ ಜಾರಿ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.ರಾತ್ರಿ ಗಂಟೆಯಿಂದ ಬೆಳಿಗ್ಗೆ 5ರ ವರೆಗೂ ಕರ್ಫ್ಯೂ ಇರಲಿದೆ.

ಬೆಂಗಳೂರಿನಲ್ಲಿ ತಜ್ಞರ ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ನಡೆಸಿದ‌ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಾಕಷ್ಟು ಜನಜಂಗುಳಿ ಸೇರಿ ಕೋವಿಡ್ ಹರಡಲು ಕಾರಣ ಆಗಬಹುದು ಎಂಬ ಕಾರಣಕ್ಕೆ ನೈಟ್ ಕರ್ಪ್ಯೂ ಹೇರಲಾಗಿದೆ.

 

ರೆಸ್ಟೊರೆಂಟ್‌, ಬಾರ್‌, ಕ್ಲಬ್‌ ಹಾಗೂ ಪಬ್‌ಗಳಲ್ಲಿ ಒಟ್ಟು ಆಸನಗಳ ಪೈಕಿ ಶೇಕಡ 50 ಜನರ ಪ್ರವೇಶದ ಮಿತಿ ವಿಧಿಸಲಾಗಿದೆ.

‘ಹೊಸ ವರ್ಷಕ್ಕೆ ಸಾರ್ವಜನಿಕ ಸ್ಥಳಗಳಲ್ಲಿ ಬಹಿರಂಗವಾಗಿ ನಡೆಸುವ ಸಂಭ್ರಮಾಚರಣೆ, ಸಮಾರಂಭಗಳನ್ನು ನಿಷೇಧಿಸಲಾಗಿದೆ’ ಎಂದು ಆರೋಗ್ಯ ಸಚಿವ ಕೆ.ಸುಧಾಕರ್‌ ಮಾಹಿತಿ ನೀಡಿದರು.

Related posts

ಸರ್ಕಾರಿ ಋಣಮುಕ್ತ ಸಾಲದ ಪ್ರಮಾಣ ಪತ್ರ ವಿತರಿಸಿದ ಶಾಸಕ ಎನ್.ಎಚ್.ಕೋನರಡ್ಡಿ

eNEWS LAND Team

ಪುನೀತ್ ರಾಜಕುಮಾರ್ ನಿಧನಕ್ಕೆ ಡಾ. ಡಿ.ವಿರೇಂದ್ರ ಹೆಗ್ಗಡೆ ಕಂಬನಿ

eNEWS LAND Team

ನೆನೆಸಿದ ಖರ್ಜೂರ, ಬಾದಾಮಿ ಆರೋಗ್ಯಕ್ಕೆ ತುಂಬಾ ಒಳ್ಳೆದಂತಾರೆ? ಎಷ್ಟು ನಿಜ?

eNewsLand Team