38 C
Hubli
ಮೇ 6, 2024
eNews Land
ಸುದ್ದಿ

ಹೊಸ ವರ್ಷಾಚರಣೆಗೆ ಕಡಿವಾಣ, ಕೋವಿಡ್ ಮಾರ್ಗಸೂಚಿ ಬಿಡುಗಡೆ: ಸಿಎಂ ಬೊಮ್ಮಾಯಿ

ಇಎನ್ಎಲ್ ಮೈಸೂರು:

ಹೊಸ ವರ್ಷಚರಣೆ ಸಂಭ್ರಮಕ್ಕೆ ಕಡಿವಾಣ,
ಕೋವಿಡ್ ನೂತನ ಮಾರ್ಗಸೂಚಿ ಬಿಡುಗಡೆ: ಸಿಎಂ ಬಸವರಾಜ ಬೊಮ್ಮಾಯಿ

ಈ ಬಾರಿಯ ಕೋವಿಡ್ ರೂಪಾಂತರಿಯಿಂದ ಹೆಚ್ಚಿನ ಸಾವು ನೋವುಗಳನ್ನು ತಪ್ಪಿಸುವ ಸಲುವಾಗಿ ಹಾಗೂ ಹೊಸ ವರ್ಷ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಭಾನುವಾರ ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿ ಗಮನಿಸುತ್ತಿದ್ದರೆ ನಿಯಂತ್ರಣದಲ್ಲಿದೆ. ಇದಕ್ಕಿಂತ ಹೆಚ್ಚಿನ ಪ್ರಕರಣಗಳನ್ನು ತಡೆಗಟ್ಟಲು ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದ್ದರೂ ಸಹ ನೈಟ್ ಕರ್ಫ್ಯೂ ಅನ್ನು ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 05 ಗಂಟೆಯವರೆಗೆ ಜಾರಿ ಮಾಡಲಾಗಿದೆ ಎಂದರು.

ಉದ್ಯಮಗಳ ನಷ್ಟ ತಪ್ಪಿಸಲು ಈ ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಷ್ಕರಿಸಲಾಗುತ್ತದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಅಂತಹ ಯಾವ ಮರುಪರಿಷ್ಕರಣೆ ಮಾಡುವುದಿಲ್ಲ ಎಂದರು.

ಸುತ್ತೂರು ಶ್ರೀಗಳಾದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಶಾಸಕರಾದ ಎಸ್.ಎ.ರಾಮದಾಸ್, ಎಲ್. ನಾಗೇಂದ್ರ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಪೊಲೀಸ್ ಉಪ ಆಯುಕ್ತರಾದ ಪ್ರದೀಪ್ ಗುಂಟಿ, ಗೀತಾ ಪ್ರಸನ್ನ, ಸೇರಿದಂತೆ ಇತರರು ಹಾಜರಿದ್ದರು.

Related posts

EXPERIMENTAL STOPPAGES OF TRAINS AT BOBBILI STATION ಬೊಬ್ಬಿಲಿ ನಿಲ್ದಾಣದಲ್ಲಿ ರೈಲುಗಳ ಪ್ರಾಯೋಗಿಕ ನಿಲುಗಡೆಗಳು

eNEWS LAND Team

ರಜತ್ ಮತ್ತು ಚೇತನ್ ಹಿರೇಕೆರೂರ ನಮ್ಮ ಆಸ್ತಿ ಕಬಳಿಸಲು ಯತ್ನಿಸುತ್ತಿದ್ದಾರೆ; ಹೀಗಂದ ಮತ್ತೊಬ್ಬ ಕಾಂಗ್ರೆಸ್ಸಿಗ!!

eNEWS LAND Team

ಅಣ್ಣಿಗೇರಿ ಹಾಗೂ ನವಲಗುಂದ ಅಭಿವೃದ್ಧಿಗೆ ಕೋಟಿ ಗಟ್ಟಲೆ ಹರಿದು ಬಂದ ಅನುದಾನ

eNEWS LAND Team