36 C
Hubli
ಏಪ್ರಿಲ್ 28, 2024
eNews Land
ಸುದ್ದಿ

ಹುಬ್ಬಳ್ಳಿಯಲ್ಲಿ ಹರಿದ ನೆತ್ತರು! ಇಬ್ಬರಿಗೆ‌ ಚಾಕು ಇರಿತ, ಪೊಲೀಸ್ ಬೇಟೆ ಶುರು!!

ಇಎನ್ಎಲ್ ಧಾರವಾಡ: ಹುಬ್ಬಳ್ಳಿಯಲ್ಲಿ ಸೋಮವಾರ ರಾತ್ರಿ ನೆತ್ತರು ಹರಿದಿದೆ. ನಗರದ ಎರಡು ಕಡೆಗಳಲ್ಲಿ ಚಾಕು ಇರಿತವಾಗಿದೆ.

ಶಹರ ಪೊಲೀಸ್ ಠಾಣೆ ವ್ಯಾಪ್ತಿಯ ಹರಿಶ್ಚಂದ್ರ ಕಾಲೋನಿಯಲ್ಲಿ ರಾಜಶೇಖರ್ ಅಯ್ಯರ್(40 ) ಗೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ.

ಸಣ್ಣಪುಟ್ಟ ಜಗಳಕ್ಕೆ ನಾಲ್ವರ ನಡುವೆ ನಡೆದ ಘಟನೆ ವೇಳೆ ಚಾಕು ಇರಿದಿದ್ದಾರೆ.

ಪವನ್ ಬಿಜ್ವಾಡ್, ಶುಭಮ್ ಬಿಜ್ವಾಡ್, ಮೋಹನ್ ಗಂಡಿನವರ ಮತ್ತು ರಾಬಿನ್ ಮರಿಯಾಳ ಆರೋಪಿತರು. ಗಾಯಗೊಂಡ ರಾಜಶೇಖರ ಕಿಮ್ಸ್’ಗೆ ದಾಖಲಾಗಿದ್ದಾನೆ.
ಈ ಬಗ್ಗೆ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌ ಎಂದು ಮೂಲಗಳು ತಿಳಿಸಿವೆ.

ಇದರ ಜೊತೆ ಬೇಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಕಸ್ತೂರಿಬಾ ನಗರದಲ್ಲಿ ನವೀನ ಎಂಬ ಯುವಕನಿಗೆ ಚಾಕು ಇರಿತವಾಗಿದೆ.
ಗಾಯಗೊಂಡ ನವೀನ ಕಿಮ್ಸ್’ಗೆ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.

Related posts

ಕಲಘಟಗಿಯಲ್ಲಿ ಬಾಬಾ ಸಾಹೇಬ ಅಂಬೇಡ್ಕರ್ ಪ್ರತಿಮೆ ಇಲ್ಲ : ಶಾಸಕ ನಿಂಬಣ್ಣವರ

eNEWS LAND Team

ಧಾರವಾಡ ಜಿಲ್ಲೆಯಾದ್ಯಂತ ಮಳೆ ಶಾಲೆ,ಕಾಲೇಜುಗಳಿಗೆ ಇಂದು ರಜೆ

eNewsLand Team

ಹುಬ್ಬಳ್ಳಿ ವಾ.ಕ.ರ.ಸಾ.ಸಂಸ್ಥೆಯಲ್ಲಿ : ವಾಲ್ಮೀಕಿ ಜಯಂತಿ

eNEWS LAND Team