35.4 C
Hubli
ಏಪ್ರಿಲ್ 28, 2024
eNews Land
ಜಿಲ್ಲೆ ರಾಜ್ಯ

ಬಿಜೆಪಿಗೆ ಕಾಂಗ್ರೆಸ್ ಗುನ್ನಾ!! ಪಾಲಿಕೆ ಆವರಣದಲ್ಲೆ ತ್ಯಾಜ್ಯ ಸುರಿದ್ರು!!!

ಇಎನ್ಎಲ್ ಧಾರವಾಡ:

ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಕಾಂಗ್ರೆಸ್ ಠಕ್ಕರ್ ನೀಡಿದೆ.

 

ಮಹಾನಗರದ ಅಶುಚಿತ್ವ ಖಂಡಿಸಿ ಮಹಾನಗರ ಪಾಲಿಕೆ ಕಚೇರಿ ಆವರಣಕ್ಕೆ ಎರಡು ಟ್ರ್ಯಾಕ್ಟರ್ ನಲ್ಲಿ ತ್ಯಾಜ್ಯ ತಂದು ಒಂದು ಟ್ರ್ಯಾಕ್ಟರ್ ಕಸ ಸುರಿದು ಪ್ರತಿಭಟನೆ ನಡೆಸಿದರು. ತ್ಯಾಜ್ಯದ ಮೇಲೆ ಮೋದಿ ಕಟೌಟ್ ಇಟ್ಟು

 

ಪಾಲಿಕೆ ಆವರಣದಲ್ಲಿ ಕಸ ಸುರಿಯದಂತೆ ಅಧಿಕಾರಿಗಳು, ಪೊಲೀಸರು ನಾನಾ ಪರಿಯಾಗಿ ಕೇಳಿಕೊಂಡರು ಒಪ್ಪದೆ ಕಸ ಸುರಿದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಕಾಂಗ್ರೆಸ್ ಮಹಾನಗರ ಜಿಲ್ಲಾಧ್ಯಕ್ಷ ಎರಡು ತಿಂಗಳ ಹಿಂದೆ ಕಾಂಗ್ರೆಸ್ ಸಮಾವೇಶ ನಡೆದಾಗ ಫ್ಲೆಕ್ಸ್ ತೆರವು ಮಾಡಿ ಕಸ ಹೆಚ್ಚಾಗಿದೆ ಎಂದು ಪಾಲಿಕೆ ಹೇಳಿತ್ತು.

ಕಾರ್ಯಕಾರಿಣಿ ಹಿನ್ನೆಲೆಯಲ್ಲಿ ನಗರದಲ್ಲಿ ತ್ಯಾಜ್ಯ ವಿಲೇವಾರಿ ಸರಿಯಾಗಿ ಮಾಡಿಲ್ಲ. ಕೇವಲ ಕಾರ್ಯಕಾರಿಣಿ ನಡೆವ ಸ್ಥಳದಲ್ಲಿ ಪಾಲಿಕೆ ಸ್ವಚ್ಛತೆಯಲ್ಲಿ ತೊಡಗಿದೆ. ಬಿಜೆಪಿ ಮಾತು ಕೇಳಿ ಅವರ ಸಮಾವೇಶ, ಮನೆ ಕಾರ್ಯಕ್ರಮಕ್ಕೆ ಮಾತ್ರ ಸ್ವಚ್ಛತೆ ಮಾಡಲಾಗುತ್ತಿದೆ ಎಂದು ಆಕ್ರೋಶ.

ಇದು ಕೇವಲ ಸಾಂಕೇತಿಕ ಪ್ರತಿಭಟನೆ. ಪಾಲಿಕೆ ಇದೇ ರೀತಿ ಬಿಜೆಪಿ ಏಜೆಂಟರಾಗಿ ಕೆಲಸ ಮಾಡಿದರೆ ನಾವು ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡರಾದ ಶಾಕೀರ್ ಸನದಿ, ಅಲ್ತಾಫ್ ಹಳ್ಳೂರ, ರಜತ ಉಳ್ಳಾಗಡ್ಡಿಮಠ, ದೀಪಾ ಗೌರಿ, ನಾಗರಾಜ ಗೌರಿ ಸೇರಿದಂತೆ ಹಲವರಿದ್ದರು.

Related posts

ಆಡುವಾಗ ಗೆಲ್ಲಲೆಂದೇ ಆಡಬೇಕು: ಸಿಎಂ ಬೊಮ್ಮಾಯಿ

eNEWS LAND Team

ಮಲಪ್ರಭಾ ಮಹಾದಾಯಿ ರೈತ ಹೋರಾಟ ಒಕ್ಕೂಟ ಬಂದ್‍ಗೆ ಬೆಂಬಲ.

eNEWS LAND Team

ಗಡಿನಾಡಿನಲ್ಲಿ ಕನ್ನಡದ ಕಂಪುನ್ನು ಹರಡಿದವರು ಕಯ್ಯಾರ ಕಿಞ್ಞಣ್ಣ ರೈ: ನಾಡೋಜ.ಡಾ.ಮಹೇಶ ಜೋಶಿ ಬಣ್ಣನೆ

eNEWS LAND Team