39 C
Hubli
ಏಪ್ರಿಲ್ 29, 2024
eNews Land
ಸುದ್ದಿ

ಅಣ್ಣಿಗೇರಿ: ಎಸ್.ಸಿ / ಎಸ್.ಟಿ ಮುಖಂಡರಿoದ ರಸ್ತೆ ತಡೆ ಪ್ರತಿಭಟನೆ

ಇಎನ್ಎಲ್ ಅಣ್ಣಿಗೇರಿ: ತಾಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮುಖಂಡರು ಪರಿಶಿಷ್ಟ ಜಾತಿಗೆ 15% ರಿಂದ 17.5%ಗೆ ಮಿಸಲಾತಿ ಹೆಚ್ಚಿಸಬೇಕು,ಹಾಗೂ ಪರಿಶಿಷ್ಠ ಪಂಗಡ ಜಾತಿಗೆ 3% ರಿಂದ 7.5% ಮಿಸಲಾತಿ ಹೆಚ್ಚಿಸಬೇಕೆಂದು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ, ಪ್ರತಿಭಟಿಸಿ, ತಹಶೀಲ್ದಾರ ಮಂಜುನಾಥ ಅಮಾಸಿ ಅವರಿಗೆ ಮನವಿ ನೀಡಿ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ನೀಡಿದರು. ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಶ್ರೀ ಕಳೆದ 100 ದಿನಗಳಿಂದ ಬೆಂಗಳೂರಿನ ಪ್ರೀಡಂ ಪಾರ್ಕನಲ್ಲಿ ಹಗಲಿರುಳು ಪ್ರತಿಭಟನೆ ಮಾಡಿದರೂ ಸರ್ಕಾರ ಗಮನಹರಿಸಿಲ್ಲ. ಶ್ರೀಗಳ ಪ್ರತಿಭಟನೆ ಬೆಂಬಲವಾಗಿ ರಾಜ್ಯಾದ್ಯಂತ ಎಸ್.ಸಿ./ಎಸ್.ಟಿ. ಜನಾಂಗದ ಮುಖಂಡರು ರಸ್ತೆ ತಡೆ ಹಾಗೂ ಪ್ರತಿಭಟನೆ ಹಮ್ಮಿಕೊಂಡ ಪ್ರಯುಕ್ತ ಸರ್ಕಾರ ತಕ್ಷಣವೇ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ಏಕಸದಸ್ಯ ಆಯೋಗದ ವರದಿ ಜಾರಿಗಾಗಿ ಆಗ್ರಹಿಸುತ್ತಿದ್ದು, ಮೀಸಲಾತಿ ಪ್ರಕಟಿಸುವಲ್ಲಿ ಕ್ರಮಕೈಗೊಳ್ಳದಿದ್ದರೇ ಉಗ್ರಹೋರಾಟ ಮಾಡುವುದಾಗಿ ತಾಲೂಕಿನ ಎಸ್.ಸಿ./ಎಸ್.ಟಿ ಜನಾಂಗದ ಮುಖಂಡರು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರವೀಣ ಶಿರಹಟ್ಟಿ, ಯಲ್ಲಪ್ಪ ದುಂದೂರ, ಮಾರುತಿ ಮರಡ್ಡಿ, ರಾಮಣ್ಣ ದೊಡ್ಡಮನಿ, ಬಸವರಾಜ ಜಾಲಿಹಾಳ, ಭೀಮಪ್ಪ ಜಂತ್ಲಿ, ಮುತ್ತು ಬಿಸ್ಟಕ್ಕನವರ, ಯೋಗೇಶ ಚಲವಾದಿ, ಮಂಜುನಾಥ ಹೊನ್ನನವರ, ವೀರಣ್ಣ ಗುಬ್ಬಿ, ಶಾಂತರಾಜ ಬಿ.ಟಿ ಹಾಗೂ ಎಸ್.ಸಿ/ಎಸ್.ಟಿ ಪಂಗಡದ ಮುಖಂಡರು ಉಪಸ್ಥಿತರಿದ್ದರು.

Related posts

ಕರ್ನಾಟಕದಲ್ಲಿ ಕೊರೋನಾ ಬ್ಲಾಸ್ಟ್! ಯಾವ ಜಿಲ್ಲೆಯಲ್ಲಿ ಎಷ್ಟು? ಇಲ್ಲಿದೆ 

eNewsLand Team

ಎಸ್.ಸಿ ಪಟ್ಟಿಯಿಂದ ಯಾರನ್ನೂ ತೆಗೆಯುವ ಪ್ರಶ್ನೆ ಇಲ್ಲ ಕಾಂಗ್ರೆಸ್ ಪ್ರೇರಿತ ರಾಜಕೀಯ ಕುತಂತ್ರ: ಸಿಎಂ ಬೊಮ್ಮಾಯಿ

eNEWS LAND Team

ಕಾಂಗ್ರೆಸ್ 40 ಸ್ಟಾರ್ ಪ್ರಚಾರಕ ಪಟ್ಟಿ ಬಿಡುಗಡೆ. ಯಾರ್ಯಾರು ಪ್ರಚಾರಕರು ನೋಡಿ!

eNEWS LAND Team