29.4 C
Hubli
ಏಪ್ರಿಲ್ 29, 2024
eNews Land
ಸುದ್ದಿ

ಸಿದ್ದರಾಮಯ್ಯ‌ ಗಂಜಿಕೇಂದ್ರ ಹುಡುಕಿ ಹೊರಟಿದ್ದಾರೆ!; ಕೇಂದ್ರ ಸಚಿವ ಜೋಶಿ ಹೀಗೆ ಹೇಳಿದ್ಯಾಕೆ??

ಇಎನ್ಎಲ್ ಹುಬ್ಬಳ್ಳಿ: ಸಿದ್ದರಾಮಯ್ಯ ತಮ್ಮ ಹೊಟ್ಟೆಪಾಡಿಗಾಗಿ ಗಂಜಿ ಕೇಂದ್ರ ಹುಡುಕಿಕೊಂಡು ಹೊರಟಿದ್ದು, ರಾಜಕೀಯ ಪುನರ್ವಸತಿಗಾಗಿ ಆರ್ ಎಸ್ ಎಸ್ ಮೂಲದ ಬಗ್ಗೆ ಪ್ರಶ್ನೆ‌ ಮಾಡುತ್ತ ಟೀಕಿಸುತ್ತಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಲೇವಡಿ ಮಾಡಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ವಿರುದ್ಧ ಬಹಳಷ್ಟು ನಾಯಕರು ಅಸಮಾಧಾನಗೊಂಡಿದ್ದಾರೆ. ಮತ್ತೊಮ್ಮೆ ಸಿಎಂ ಆಗಬೇಕೆಂಬ ಭ್ರಮೆಯಲ್ಲಿದ್ದಾರೆ. ಆದರೆ, ಸಿದ್ದರಾಮಯ್ಯ ಹೇಗಾದರೂ ಮಾಡಿ ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ಆಸೆಯಿಂದ ಆರೆಸ್ಸೆಸ್ ಟೀಕಿಸಿ, ಅಲ್ಪಸಂಖ್ಯಾತರನ್ನು ಓಲೈಸುತ್ತಿದ್ದಾರೆ ಎಂದರು.
ಆರೆಸ್ಸೆಸ್ ನಿಂದ ನಾವು ಬಂದಿದ್ದರಿಂದ ನಾವು ಅದರ ಬಗ್ಗೆ ಮಾತನಾಡಿದರೆ ನಾವು ಪ್ರತಿಕ್ರಿಯಿಸುತ್ತೇವೆ. ಆರೆಸ್ಸೆಸ್ ಎಂದೂ ಇಂಥದರ ಬಗ್ಗೆ ಪ್ರತಿಕ್ರಿಯಿಸಲ್ಲ. ಇನ್ನು ಮುಂದೆ ಸಿದ್ದರಾಮಯ್ಯ ಅವರ ಇಂತಹ ಹೇಳಿಕೆಗಳಿಗೆ ಪ್ರತಿಕ್ರಿಯಿಸಲ್ಲ ಎಂದರು.

ಮೋದಿ ಮೋದಿಯೇ ನೆಹರು ನೆಹರುನೇ‌ ಎಂದು ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟಾಂಗ್

ಆ ಹಿನ್ನೆಲೆಯಲ್ಲಿ ಆರೆಸ್ಸೆಸ್ ಟೀಕಿಸುತ್ತಿದ್ದಾರೆ. ಇಷ್ಟು ದಿನ ನಾವು ಹಿಂದೂಗಳಲ್ಲ ಎಂದು ಹೇಳುತ್ತಿದ್ದ ಕಾಂಗ್ರೆಸ್ಸಿಗರು ಈಗ ನಾವು ಹಿಂದೂಗಳೆಂದು ಹೇಳಿಕೊಳ್ಳುವ ಸ್ಥಿತಿ ಬಿಜೆಪಿಯಿಂದ ಬಂದಿದ್ದೆ. ಆರೆಸ್ಸೆಸ್ ಸಾಂಸ್ಕೃತಿಕ ಸಂಘಟನೆ. ಈ ಬಗ್ಗೆ ಸಿದ್ದರಾಮಯ್ಯರಿಗೂ ಗೊತ್ತಿದೆ. ಆದರೆ ಪುನರ್ವಸತಿಗಾಗಿ ಅದರ ಬಗ್ಗೆ ಟೀಕಿಸುತ್ತಿದ್ದಾರೆ ಎಂದು ಸಚಿವ ಜೋಶಿ ಲೇವಡಿ ಮಾಡಿದರು.

Related posts

ಕಿಯಾರಾ ಹೊಸ ಬೋಲ್ಟ್ ಲುಕ್ಕಿಗೆ ಹುಡುಗರ ಹಾರ್ಟ್ ಕ್ರ್ಯಾಶ್!!

eNewsLand Team

ಅಣ್ಣಿಗೇರಿ ತಾಲೂಕನ್ನು ಸರ್ಕಾರ ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ

eNewsLand Team

ಕಾರವಾರದ ಪ್ರಾಧ್ಯಾಪಕರೊಬ್ಬರು ಪುನೀತ್ ಮಣ್ಣಿನ ಮೂರ್ತಿ ಮಾಡಿದ್ದಾರೆ

eNEWS LAND Team