37 C
Hubli
ಮೇ 5, 2024
eNews Land
ಸುದ್ದಿ

ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಶೀಘ್ರ ತೀರ್ಮಾನ : ಸಿಎಂ ಬೊಮ್ಮಾಯಿ

ಇಎನ್ಎಲ್ ಉಡುಪಿ: ಪಠ್ಯಪುಸ್ತಕ ಪರಿಷ್ಕರಣೆಯ ವರದಿ ಪರಿಶೀಲನೆಯ ನಂತರ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಇಂದು ಅವರು ಉಡುಪಿ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ಆಯೋಜಿಸಿರುವ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜೀ ಅವರ ನೇತೃತ್ವದ ಕೇಂದ್ರ ಸರ್ಕಾರದ 8ನೇ ವರ್ಷಾಚರಣೆ ಅಂಗವಾಗಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಪಠ್ಯಪುಸ್ತಕದ ಪರಿಷ್ಕರಣೆಗೆ ಸಂಬಂಧಿಸಿದಂತೆ, ಈಗಾಗಲೇ ಪಠ್ಯದಲ್ಲಿರುವ ಪಾಠಗಳನ್ನು ತೆಗೆಯುವಂತೆ ಕೆಲ ಸಾಹಿತಿಗಳು ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪಠ್ಯಪುಸ್ತಕ ಪರಿಷ್ಕರಣೆಯ ಬಗ್ಗೆ ಸಮಗ್ರ ವರದಿಯನ್ನು ಕೇಳಲಾಗಿದೆ. ಸ್ವಾಮೀಜಿಗಳು ಹಾಗೂ ಇತರರ ಅಭಿಪ್ರಾಯಗಳನ್ನು ಪರಿಗಣಿಸಲಾಗುವುದು. ಈ ಎಲ್ಲ ವಿಚಾರಗಳ ಬಗ್ಗೆ ಸಮಗ್ರ ವರದಿ ಹಾಗೂ ವಾಸ್ತವಾಂಶವನ್ನು ತಿಳಿಸುವಂತೆ ಶಿಕ್ಷಣ ಸಚಿವರಿಗೆ ಸೂಚನೆ ನೀಡಲಾಗಿದೆ. ಈ ಬಗ್ಗೆ ವರದಿ ಪಡೆದು, ಪರಿಶೀಲಿಸಿದ ನಂತರ ಸೂಕ್ತ ತೀರ್ಮಾನವನ್ನು ಕೈಗೊಳ್ಳಲಾಗುವುದು. ನಾಳೆ ವರದಿ ದೊರೆಯಲಿದ್ದು, ಪಠ್ಯಗಳನ್ನು ವಾಪಸ್ಸು ಪಡೆಯುತ್ತೇವೆ ಎನ್ನುವ ಸಾಹಿತಿಗಳೊಂದಿಗೆ ಈ ಬಗ್ಗೆ ಚರ್ಚಿಸಲಾಗುವುದು ಎಂದರು.

ಎಸಿಬಿ ಈಗಾಗಲೇ ಬಲವರ್ಧನೆಯಾಗಿದೆ. ಲೋಕಾಯುಕ್ತ ಇದ್ದರೂ , ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಎಸಿಬಿ ಆ ಅಧಿಕಾರವಿದೆ ಎಂದರು.

ಲವ್ ಜಿಹಾದ್ ಕರಾವಳಿ ಭಾಗದಲ್ಲಿ ಮತ್ತೊಮ್ಮೆ ಸದ್ದುಮಾಡುತ್ತಿರುವ ಬಗ್ಗೆ ಪ್ರತಿಕ್ರಯಿಸಿ, ಇದಕ್ಕಾಗಿ ಕಾನೂನು ರೂಪಿಸಲಾಗಿದ್ದು, ಯಾರೂ ಕಾನೂನು ಉಲ್ಲಂಘನೆ ಮಾಡುವಂತಿಲ್ಲ ಎಂದರು.

Related posts

17ರಂದು ರೈಲ್ವೇ ವೇಳಾ ಪಟ್ಟಿ ಬದಲಾವಣೆ: ಪ್ರಯಾಣಿಕರು ಗಮನಿಸಿ

eNEWS LAND Team

ಹುಬ್ಬಳ್ಳಿಗೆ ಮಂಕಿ ಕ್ಯಾಪ್ ಹಾಕೊಂಡು ರಾಬರಿಗೆ ಬಂದವ್ ಅಂದರ್!!! ಪಿನ್ ಟು ಪಿನ್ ಡಿಟೈಲ್ ಇಲ್ಲಿದೆ

eNewsLand Team

ಧಾರವಾಡದಲ್ಲಿ ಮತ್ತೆರಡು ಒಮಿಕ್ರೋನ್ ದೃಢ ; ಸೋಂಕಿತರಿಗೆ ಹೋಂ ಐಸೋಲೇಷನ್‍ದಲ್ಲಿ ಚಿಕಿತ್ಸೆ

eNEWS LAND Team