27 C
Hubli
ಸೆಪ್ಟೆಂಬರ್ 25, 2023
eNews Land
ಅಪರಾಧ ಕೃಷಿ

ಮೆಣಸಿನ ಸಸಿ ಕಿತ್ತು ವಿಕೃತಿ ಮೆರೆದ ದುಷ್ಕರ್ಮಿಗಳು

 

ಅಣ್ಣಿಗೇರಿ:

ಪಟ್ಟಣದ ಮಜ್ಜಿಗುಡ್ಡ ಗ್ರಾಮಕ್ಕೆ ಹೋಗುವ ದಾರಿಯಲ್ಲಿ ಸಿಗುವ ರೈತ ದೊಡ್ಡಯ್ಯ ಕಾವಯ್ಯ ಹಿರೇಮಠ ಅವರ ಹೊಲದಲ್ಲಿ 5 ಗುಂಟೆಗಿಂತ ಹೆಚ್ಚಿನ ಪ್ರಮಾಣದ ಹೊಲದಲ್ಲಿ ಮೆಣಸಿನಕಾಯಿ ಸಸಿಗಳನ್ನು ಕಿತ್ತು ದುಷ್ಕರ್ಮಿಗಳು ಕಿತ್ತು ವಿಕೃತಿ ಮೆರೆದಿದ್ದಾರೆ.

ಎರಡು ಎಕರೆ 20 ಗುಂಟೆ ಹೊಲದಲ್ಲಿ ಮೆಣಸಿನಕಾಯಿ ಸಸಿಗಳನ್ನು ಕಿತ್ತೆಸೆದು ದುಷ್ಕರ್ಮಿಗಳು 1 ಕ್ವಿಂಟಲ್ ನಷ್ಟು ಬೆಳೆ ನಾಶ ಪಡಿಸಿದ್ದಾರೆ.

ಸಂಕಷ್ಟದಲ್ಲಿರುವ ರೈತರು ಸಾಲ ಮಾಡಿ ಬೆಳೆಸಿದ ಬೆಳೆ ಕೈಗೆ ಬರುವ ಹೊತ್ತಿನಲ್ಲಿ ದುಷ್ಕರ್ಮಿಗಳು ಈ ರೀತಿ ಬೆಳೆ ನಾಶ ಪಡಿಸುತ್ತಿರುವುದು ರೈತರಲ್ಲಿ ಆತಂಕ ಹೆಚ್ಚಿಸಿದೆ.

ಈ ತಕ್ಷಣವೇ ಅಣ್ಣಿಗೇರಿ ಪೊಲೀಸ್ ಠಾಣಾಧಿಕಾರಿಗಳು ಜಾಗೃತಿವಹಿಸಿ ರೈತರ ಹೊಲದಲ್ಲಿ ಬೆಳೆ ನಾಶಪಡಿಸುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಹಾಗೂ ತಪ್ಪಿತಸ್ಥರಿಗೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪಟ್ಟಣದ ರೈತರು ಆಗ್ರಹಿಸಿದ್ದಾರೆ.

 

 

Related posts

ಇನ್ಸ್ಟಾಗ್ರಾಂ ಬಳಸಿ ಮದುವೆ ಮುರಿಯಲು ಮುಂದಾದ ನಾಲಾಯಕ್!

eNewsLand Team

ನವಲಗುಂದ: ಸಾಲಬಾಧೆಗೆ ಕೆರೆಗೆ ಹಾರಿ ರೈತ ಆತ್ಮಹತ್ಯೆ

eNewsLand Team

ಹೂಡಿಕೆ ಮಾಡಿಸುವುದಾಗಿ ಆನ್ಲೈನಲ್ಲಿ 4ಲಕ್ಷ ಪೀಕಿದ್ದವ ಮಹಾರಾಷ್ಟ್ರದಲ್ಲಿ ಅರೆಸ್ಟ್

eNewsLand Team