ಇಎನ್ಎಲ್ ಅಣ್ಣಿಗೇರಿ: ಕೇಂದ್ರ ಸರ್ಕಾರದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ, ಹಾಗೂ ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ, ಪಟ್ಟಣದ ಕೃಷಿಕನ ಮಗ ಎ.ಆಯ್.ನಡಕಟ್ಟಿನ ವಿಶ್ವಶಾಂತಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪಿಸಿ, ಕೃಷಿ ಕ್ಷೇತ್ರದಲ್ಲಿ ರೈತರ ಕೃಷಿ ಚಟುವಟಿಕೆಗೆ ಉಪಯುಕ್ತವಾಗುವ ಕೃಷಿ ಉಪಕರಣಗಳನ್ನು ತಯಾರಿಸಿ, ಕಳೆದ 40 ವರ್ಷಗಳಿಂದ ಕೃಷಿ ವಿಜ್ಞಾನಿಯಾಗಿ 16 ಕೃಷಿ ಉಪಕರಣಗಳನ್ನು ಸಂಶೋಧನೆ ಮಾಡಿದ್ದಾರೆ.
ನಾಡಿನ ರೈತಕುಲಕ್ಕೆ ನೀಡಿದ ಕೊಡುಗೆ ಪರಿಗಣಿಸಿ, ಕೇಂದ್ರ ಸರ್ಕಾರ ನೀಡುವ ಪದ್ಮಶ್ರೀ ಪ್ರಶಸ್ತಿ ಪುರಸ್ಕಾರಕ್ಕೆ ಆಯ್ಕೆಯಾಗಿ, ಅಣ್ಣಿಗೇರಿ ಕೀರ್ತಿ ರಾಷ್ಟ್ರವ್ಯಾಪಿ ತಂದಿದ್ದಕ್ಕೆ ಪಟ್ಟಣದ ರೈತಬಾಂಧವರು ಹರ್ಷವ್ಯಕ್ತಪಡಿಸಿದ್ದಾರೆ. ಮಠಾಧೀಶರು, ಗಣ್ಯಮಾನ್ಯರು, ಹಿತೈಷಿಗಳು, ಬಂಧು-ಬಳಗದವರು, ಶಿಕ್ಷಣ ಸಂಸ್ಥೆಗಳು, ಹಾಗೂ ಸಂಘ ಸಂಸ್ಥೆಗಳ ಮುಖಂಡರು, ಅಭಿಮಾನಿಗಳು, ರಾಜಕೀಯ ಮುಖಂಡರು, ಅಭಿನಂದಿಸಿದ್ದಾರೆ.