ಇಎನ್ಎಲ್ ಹುಬ್ಬಳ್ಳಿ,
ಹುಬ್ಬಳ್ಳಿಯಲ್ಲಿ ನೆನಪಿರಲಿ ಖ್ಯಾತಿಯ ನಟ ಪ್ರೇಮ್ ಹೇಳಿಕೆ.
ಹುಬ್ಬಳ್ಳಿಯ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿ ಸಿದ್ಧಾರೂಢರ ದರ್ಶನ ಪಡೆದ ಪ್ರೇಮ್.
ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ ವಿಚಾರ.
ಎಂಇಎಸ್ ಪುಂಡಾಟಿಕೆ ಹೀಗೆ ಮುಂದುವರೆದರೆ ರಾಜ್ಯದಲ್ಲಿ ಎಂಇಎಸ್ ಸಂಘಟನೆ ಬ್ಯಾನ್ ಆಗಬೇಕು.
ಪುಂಡಾಟಿಕೆಯಿಂದ ದೇಶದಲ್ಲಿ ಎಂಇಎಸ್ ಗೆ ಒಳ್ಳೆಯ ಹೆಸರು ಬರಲ್ಲ.
ರಾಜ್ಯದಲ್ಲಿ ಕನ್ನಡಿಗರು ಹಾಗೂ ಮರಾಠಿಗರು ಭಾಂದವ್ಯದಿಂದ ಇದ್ದಾರೆ.
ಆ ಭಾಂದವ್ಯವನ್ನ ಹಾಳು ಮಾಡುವಂತಹ ಕೆಲಸಕ್ಕೆ ಎಂಇಎಸ್ ಕೈ ಹಾಕಬಾರದು.
ಯಾವುದೇ ಸಂಘಟನೆಗಳಿರಲಿ ಶಾಂತಿ ಕಾಪಾಡಬೇಕು.
ರಾಜ್ಯದಲ್ಲಿ ಮರಾಠಿ ಚಿತ್ರಗಳಿಗೂ ಹಾಗೂ ಹಿಂದಿ ಚಿತ್ರಗಳಿಗೂ ಅವಕಾಶ ನೀಡಲಾಗಿದೆ.
ಎಂಇಎಸ್ ನವರು ಸಾರ್ವಜನಿಕ ಆಸ್ತಿಪಾಸ್ತಿ ಹಾಳು ಮಾಡುವದರಿಂದ ಏನನ್ನೂ ಸಾಧಿಸಲಾಗುವುದಿಲ್ಲ.
ಎಂಇಎಸ್ ಬ್ಯಾನ್ ಮಾಡುವ ವಿಚಾರದಲ್ಲಿ ಸರ್ಕಾರದ ನಿಲುವು ಏನಿದೆಯೋ ಗೊತ್ತಿಲ್ಲ.
ಆದ್ರೆ ಕನ್ನಡಿಗರ ಮೇಲಿನ ದಬ್ಬಾಳಿಕೆ ಸಹಿಸಲ್ಲ.
ಕನ್ನಡ ಚಿತ್ರರಂಗ ಹೋರಾಟಕ್ಕಿಳಿದರೆ ನಮ್ಮವರಿಗೆ ತೊಂದರೆಯಾಗಲಿದೆ ಅನ್ನೋ ಹಿನ್ನೆಲೆ ಶಾಂತವಾಗಿದ್ದಾರೆ..
next post