ಇಎನ್ಎಲ್ ರಾಣಿಬೆನ್ನೂರು: ಕಾರು ಮತ್ತು ಟಿಪ್ಪರ್ ವಾಹನಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದು ನಾಲ್ವರು ಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ತಾಲೂಕಿನ ಮಾಕನೂರ ಗ್ರಾಮದ ರಾಷ್ಟ್ರೀಯ ಹೆದ್ದಾರಿ48 ರ ರಸ್ತೆ ಮೇಲ್ಸೇತುವೆ ಬಳಿ ಸಂಭವಿಸಿದೆ.
ದಾವಣಗೆರೆಯ ಕಿರಣ(20) ಸ್ಥಳದಲ್ಲಿಯೇ ಮೃತಪಟ್ಟಿದ್ದು ಶಶಿಧರ(20) ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. ಕಾರಿನಲ್ಲಿದ್ದ ಇತರೆ ನಾಲ್ವರು ಗಾಯಗೊಂಡಿದ್ದು ಆ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕುಮಾರಪಟ್ಟಣಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.