24.8 C
Hubli
ಏಪ್ರಿಲ್ 25, 2024
eNews Land
ಅಪರಾಧ

ಹುಬ್ಬಳ್ಳಿ; ಜವರಾಯ ಅಟ್ಟಹಾಸ, ಅಪಘಾತ ಎಂಟಕ್ಕೇರಿದ ಸಾವು

ಇಎನ್ಎಲ್ ಹುಬ್ಬಳ್ಳಿ:

ಹುಬ್ಬಳ್ಳಿ ಹೊರವಲಯದಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ತಾರಿಹಾಳ ಬೈಪಾಸ್’ನ ಧಾರಾವತಿ ದೇವಸ್ಥಾನದ ಬಳಿ ಸೋಮವಾರ ರಾತ್ರಿ 1.30ರ ವೇಳೆ ಸರಣಿ ಅಪಘಾತ ನಡೆದಿದ್ದು, ಸ್ಥಳಗಳಲ್ಲಿ  ಮೂವರು ಸೇರಿ ಎಂಟು ಮಂದಿ ಮೃತಪಟ್ಟಿದ್ದಾರೆ. ಎಂಟು ಮಂದಿ ಗಂಭೀರ ಗಾಯಗೊಂಡಿದ್ದು, ಹಲವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.

ಧಾರವಾಡದ ಬಾಡ ಕ್ರಾಸ್’ನಲ್ಲಿ ನಡೆದ ಅಪಘಾತ ಪ್ರಕರಣ ಮಾಸುವ ಮುನ್ನವೇ ಇದೀಗ ಮತ್ತೊಂದು ಅವಘಡ ಸಂಭವಿಸಿದೆ.

ಈಗಿನ ಮಾಹಿತಿ ಪ್ರಕಾರ, ಮುಂದೆ ಚಲಿಸುತ್ತಿದ್ದ ಟ್ರ್ಯಾಕ್ಟರ್’ಗೆ ಹಿಂಬದಿಯಿಂದ ಟೂರಿಸ್ಟ್ ಬಸ್ ಡಿಕ್ಕಿ ಹೊಡೆದಿದೆ. ಅದರ ಹಿಂದೆ ಬಂದ ಲಾರಿ ಬಸ್’ಗೆ ಡಿಕ್ಕಿ ಹೊಡೆದಿದೆ.

ಸರಣಿ ಅಪಘಾತದಲ್ಲಿ ಟೂರಿಸ್ಟ್ ಬಸ್’ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಕಿಮ್ಸ್’ಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಉತ್ತರ ಸಂಚಾರ ಠಾಣೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮೃತರ ಹಾಗೂ ಗಾಯಾಳುಗಳ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಹೆಚ್ಚಿನ ಮಾಹಿತಿ ಈವರೆಗೆ ಲಭ್ಯವಾಗಿಲ್ಲ.

Related posts

ತುಮಕೂರಿನ ಪಾವಗಡದಲ್ಲಿ ಬಸ್ ಅಪಘಾತ: ಮೃತಪಟ್ಟವರ ಕುಟುಂಬದವರಿಗೆ ಪರಿಹಾರ: ಸಿಎಂ ಬೊಮ್ಮಾಯಿ

eNEWS LAND Team

ಗೂಡ್ಸ್ ಲಾರಿ ಮತ್ತು ಬೈಕ್ ಅಪಘಾತ : ಯುವಕ ಸ್ಥಳದಲ್ಲಿಯೇ ಸಾವು

eNEWS LAND Team

ತಾಯಿ ಮಗನ ಅಶ್ಲೀಲ ಚಿತ್ರ..ಮೊಬೈಲ್ ಬಳಕೆದಾರರೆ ಎಚ್ಚರ.. ಆನ್ಲೈನ್ ವಿಕೃತಿಗೆ ಬಲಿಯಾದಿರಿ!!

eNEWS LAND Team