ಇಎನ್ಎಲ್ ಹುಬ್ಬಳ್ಳಿ: ಮನೆಗೆ ಹೋಗುತ್ತಿದ್ದ ರೌಡಿಶೀಟರ್ ಅಕ್ಬರ್ ಅಲ್ಲಾಭಕ್ಷ ಮುಲ್ಲಾ ಭೀಕರವಾಗಿ ಕೊಲೆಯಾಗಿದ್ದಾನೆ.
ಅರವಿಂದ ನಗರದ ಪಿಎನ್’ಟಿ ಕ್ವಾಟರ್ಸ್ ಹಿಂದಿನ ರಸ್ತೆಯಲ್ಲಿ ಹತ್ಯೆ ಮಾಡಲಾಗಿದೆ.
ತೊರವಿಹಕ್ಕಲದ ನಿವಾಸಿಯಾಗಿದ್ದ ಅಕ್ಬರ್ ಮುಖ ಗುರುತು ಸಿಗದಂತೆ ಮಚ್ಚಿನಿಂದ ಕೊಚ್ಚಿ ಕೊಲೆ ಆಗಿದ್ದಾನೆ.
ಗುರುವಾರ ತಡರಾತ್ರಿ ಕೊಲೆ ಮಾಡಿದ ಹಳೇಹುಬ್ಬಳ್ಳಿ ಠಾಣೆಗೆ ಆರೋಪಿ ಸದಾನಂದ ಕುರ್ಲಿ ತಾನೇ ಕೊಲೆ ಮಾಡಿರುವುದಾಗಿ ಶುಕ್ರವಾರ ಶರಣಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸದ್ಯ ಕಿಮ್ಸ್ ನಲ್ಲಿ ಅಕ್ಬರ್ ಶವವಿದೆ. ಮೃತದೇಹದ ಮೆರವಣಿಗೆ ಮಾಡಲು ಆತನ ಸಹಚರರು, ರೌಡಿ ಶೀಟರ್’ಗಳು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ