34 C
Hubli
ಮಾರ್ಚ್ 23, 2023
eNews Land
ಅಪರಾಧ ಆರ್ಥಿಕತೆ

ಷೇರ್ ಮಾರ್ಕೆಟ್ ಹೆಸರಲ್ಲಿ ಲಕ್ಷ ಲಕ್ಷ ಪಂಗನಾಮ: ಕಣ್ಣೀರಲ್ಲಿ ಕೈ ತೊಳೆಯೊ ಸ್ಥಿತಿ!!

Listen to this article

ಇಎನ್ಎಲ್ ಧಾರವಾಡ

ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ದುಪ್ಪಟ್ಟಾಗುತ್ತದೆ ಎಂದು ಗೋಪನಕೊಪ್ಪದ ಸ್ಮೀತಾ ಜಮಾದಾರ ಅವರಿಗೆ ನಂಬಿಸಿದ ಮೂವರು, ₹21 ಲಕ್ಷ ವಂಚನೆ ಮಾಡಿದ್ದಾರೆ.

ಪತಿಯ ಪಿಂಚಣಿ ಹಣದಿಂದ ಜೀವನ ನಡೆಸುತ್ತಿದ್ದ ಸುಮಿತಾ ಅವರಿಗೆ ಪರಿಚಯಯವಿದ್ದ ಅಕ್ಕಮ್ಮ ರೆಡ್ಡಿಯಿಂದ ಬೆಳಗಾವಿಯ ಶಿವಪುತ್ರಯ್ಯ ಹಿರೇಮಠ ಪರಿಚಯವಾಗಿದ್ದಾನೆ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ದುಪ್ಪಟ್ಟು ಬರುತ್ತದೆ ಎಂದು ನಂಬಿಸಿ, ₹3ಲಕ್ಷ ಚೆಕ್‌ ಮೂಲಕ ಪಡೆದಿದ್ದನು. ನಂತರ ಅಕ್ಕಮ್ಮರೆಡ್ಡಿ ಜೊತೆ ಜಾಹೀದಾ ಬೇಗಂ ಎಂಬವಳು ಸೇರಿಕೊಂಡು ಮತ್ತೆ ಹಣ ಹೂಡಿಕೆ ಮಾಡಲು ₹18 ಲಕ್ಷವನ್ನು ಫೋನ್‌ ಪೇ ಮೂಲಕ ವರ್ಗಾಯಿಸಿಕೊಂಡಿದ್ದಾರೆ. ಷೇರು ಮಾರುಕಟ್ಟೆಗೆ ಹಣವೂ ಹಾಕದೆ, ಮರಳಿಯೂ ನೀಡದೆ ವಂಚಿಸಿದ್ದಾರೆ ಎಂದು ವೃದ್ಧೆ ಸ್ಮೀತಾ ಮೂವರ ವಿರುದ್ಧ ಹುಬ್ಬಳ್ಳಿ ಸೈಬರ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Related posts

ಬಿಟ್ ಕಾಯಿನ್ ಹಗರಣದ ಬಗ್ಗೆ ದಾಖಲೆಗಳಿದ್ದರೆ ತನಿಖಾ ಸಂಸ್ಥೆಗಳಿಗೆ ನೀಡಿ- ಸಿಎಂ ಬೊಮ್ಮಾಯಿ

eNEWS LAND Team

ಚಡ್ಡಿ ಖರೀದಿಗೆ ಹೋಗಿ ಲಕ್ಷ ಕಳೆದುಕೊಂಡ! ಆನ್ಲೈನ್ ಮುಂಡಾಮೋಚ್ತು!!

eNewsLand Team

ಇಂದಿನ ಮಾರುಕಟ್ಟೆ

eNewsLand Team