ಹುಬ್ಬಳ್ಳಿ :
ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಮೃತಪಟ್ಟಿದ್ದಾರೆ.
ಚಂದ್ರು ಮರಿಬಸನಗೌಡರ (07), ಗೌತಮ ಮರಿಬಸನಗೌಡರ(10) ಮೃತ ಮಕ್ಕಳು. ರೇವಣಸಿದ್ಧಯ್ಯಾ ಹಿರೇಮಠ ಎಂಬುವರಿಗೆ ಸೇರಿದ ಜಮೀನಿನಲ್ಲಿದ್ದ ಕೃಷಿ ಹೊಂಡದಲ್ಲಿ ಈಜಲು ಹೋಗಿ ಸಹೋದರರಿಬ್ಬರು ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.