29 C
Hubli
ಸೆಪ್ಟೆಂಬರ್ 26, 2023
eNews Land
ಜಿಲ್ಲೆ

ಧಾರವಾಡ: ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆದ ಸಿಬ್ಬಂದಿ ಯಾರು ಗೊತ್ತಾ?

ಇಎನ್ಎಲ್ ಧಾರವಾಡ :ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 10 ಜನ ರಾಜ್ಯಸರ್ಕಾರದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೆ 2020-21 ನೇ ಸಾಲಿನ ಜಿಲ್ಲಾ ಮಟ್ಟದ ನೌಕರರ ಸರ್ವೋತ್ತಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಶಸ್ತಿಗೆ ಭಾಜನರಾದ ಸಮಾಜ ಕಲ್ಯಾಣ ಜಂಟಿನಿರ್ದೇಶಕ ಡಾ. ಎನ್.ಆರ್. ಪುರುಷೋತ್ತಮ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಾ. ಸುಜಾತಾ ಹಸವಿಮಠ, ಡಾ. ಎಸ್.ಎಮ್. ಹೊನಕೇರಿ, ಕಿಮ್ಸ್‍ನ ಡಾ. ಲಕ್ಷ್ಮೀಕಾಂತ ಲೋಕರೆ ಡಾ. ರಾಜಶೇಖರ ದ್ಯಾಬೇರಿ, ಡಾ .ಈಶ್ವರ ಹಸಬಿ, ಡಿಮ್ಹಾನ್ಸ್‍ನ ಡಾ .ರಾಘವೇಂದ್ರ ನಾಯಕ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಡಾ. ಅನ್ನಪೂರ್ಣ ಸಂಗಳದ, ಸಾಂಖ್ಯಿಕ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ಕಂಟೆಪ್ಪಗೌಡ್ರ, ವಾರ್ತಾ ಸಹಾಯಕ ಡಾ. ಸುರೇಶ ಹಿರೇಮಠ ಅವರನ್ನು ಸಚಿವರು ಹಾಗೂ ಗಣ್ಯರು ಗಣರಾಜ್ಯೋತ್ಸವ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಿದರು.

ಇದೇ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಜಿಲ್ಲೆಯ ಡಾ.ಎಸ್.ಆರ್. ರಾಮನಗೌಡರ, ಮಹೇಂದ್ರ ಸಿಂಘಿ, ಡಾ.ವೇದವ್ಯಾಸ ದೇಶಪಾಂಡೆ ಅವರನ್ನು ಗೌರವಿಸಲಾಯಿತು.

Related posts

ಮತದಾರರ ಜಾಗೃತಿ ಅಭಿಯಾನಕ್ಕೆ ಜಿಪಂ ಸಿಇಒ ಸ್ವರೂಪ ಟಿ.ಕೆ ಚಾಲನೆ: ಸೈಕಲ್ ಜಾಥಾ ಮೂಲಕ ಮತದಾನ ಜಾಗೃತಿ

eNEWS LAND Team

ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಸ್ವೀಕರಿಸಿದ ಅಹವಾಲು ಅರ್ಜಿಗಳು 634

eNEWS LAND Team

ಮೇ.23 ರಂದು Train The Training ಹುದ್ದೆಗೆ ನೇರ ಸಂದರ್ಶನ

eNEWS LAND Team