35 C
Hubli
ಮಾರ್ಚ್ 28, 2023
eNews Land
ಜಿಲ್ಲೆ ರಾಜ್ಯ

ಹಿಜಾಬ್ ನಿರ್ಬಂಧ ಖಂಡಿಸಿ ಹುಬ್ಬಳ್ಳಿಯಲ್ಲಿ ಅಂಜುಮನ್ ಸಂಸ್ಥೆ ಬೃಹತ್ ಪ್ರತಿಭಟನೆ

Listen to this article

ಇಎನ್ಎಲ್ ಧಾರವಾಡ: ಶಾಲಾ ಕಾಲೇಜುುಗಳಲ್ಲಿ ಹಿಜಾಬ್ ನಿರ್ಬಂಧ ಖಂಡಿಸಿ ಅಂಜುಮನ್ ಸಂಸ್ಥೆಯಿಂದ ಇಲ್ಲಿನ ತಹಸೀಲ್ದಾರ್ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಯಿತು.

ಹಿಜಾಬ್ ಹಮಾರಾ ಹಕ್ ಹೈ‌ ಎಂದು ಘೋಷಣೆ ಕೂಗಿದ ಮುಸ್ಲಿಂ ಸಮುದಾಯದವರು ಈ ವಿವಾದವನ್ನು ಸರ್ಕಾರ ತಕ್ಷಣ ತಡೆಯಬೇಕಿದೆ. ಮುಸ್ಲಿಂ ವಿದ್ಯಾರ್ಥಿನಿಯರು ಯಾವುದೇ ಭಯ ಇಲ್ಲದೆ ಶಾಲೆಗೆ‌ ಬರುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಹಲವಾರು ವರ್ಷಗಳಿಂದ ಹಿಜಾಬ್ ಧರಿಸಿ ಹೆಣ್ಣು ಮಕ್ಕಳು ಶಾಲೆ ಕಾಲೇಜಿಗೆ ಬರುತ್ತಿದ್ದಾರೆ. ಇಷ್ಟು ವರ್ಷ ಇಲ್ಲದ ವಿವಾದ ಈಗ ಉಂಟಾಗಲು ಕಾರಣವೇನು? ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಸಲುವಾಗಿ ಈ ವಿವಾದ ಮೂಡಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶಾಲೆಗಳಲ್ಲಿ ಶೌಚಾಲಯ, ಕುಡಿಯುವ ನೀರು, ಗ್ರಂಥಾಲಯ ಸೇರಿದಂತೆ ಗುಣಮಟ್ಟದ ಶಿಕ್ಷಣ ನೀಡುವ ಸಮಸ್ಯೆ ಇದೆ. ಇದನ್ನು ಬಗೆಹರಿಸಲು ಸರ್ಕಾರ ಮುಂದಾಗಬೇಕು. ಹಿಜಾಬ್ ವಿರೋಧಿಸಲು ಕೇಸರಿ ಶಾಲು ಧರಿಸಿ ಬರುವುದು, ಅದರಿಂದಾಗಿ ವಿದ್ಯಾರ್ಥಿಗಳ ಜೀವನ ಹಾಳಾಗುವುದು ಸರಿಯಲ್ಲ. ಎಲ್ಲರಿಗೂ ಅವರವರ ಧರ್ಮವನ್ನು ಪಾಲನೆ ಮಾಡಲು ಹಕ್ಕಿದೆ ಎಂದು ಹೇಳಿದರು.

ಅಂಜುಮನ್ ಸಂಸ್ಥೆಯ ಅಧ್ಯಕ್ಷ ಮಹಮ್ಮದ್ ಯೂಸುಫ್ ಸವಣೂರು, ಉಪಾಧ್ಯಕ್ಷ ಅಲ್ತಾಫ್ ಹಳ್, ಕಾಂಗ್ರೆಸ್ ಮಹಾನಗರ ಜಿಲ್ಲಾಧ್ಯಕ್ಷ ಅಲ್ತಾಫ್ ಕಿತ್ತೂರು ಸೇರಿದಂತೆ ಹಲವಾರು ಜನರಿದ್ದರು.

Related posts

ಹಂತಹಂತವಾಗಿ ಸಮಗ್ರ ಗ್ರಾಮೀಣಾಭಿವೃದ್ಧಿಗೆ ಪಣತೊಟ್ಟ : ಸಿಎಂ ಬೊಮ್ಮಾಯಿ

eNEWS LAND Team

ಧಾರವಾಡ: ಸಮಾಜ ಕಲ್ಯಾಣ ಇಲಾಖೆ ವಿವಿಧ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

eNewsLand Team

ಕರ್ನಾಟಕದಲ್ಲಿಂದು ಕೊರೊನಾ ಪ್ರಕರಣಗಳು ಎಷ್ಟು?

eNEWS LAND Team