23.8 C
Hubli
ಮಾರ್ಚ್ 28, 2023
eNews Land
ಜಿಲ್ಲೆ

ಹೊಲ್ತಿಕೋಟಿ ಕೆರೆ ದುರಸ್ತಿ ಆರಂಭ

Listen to this article

ಇಎನ್ಎಲ್ ಧಾರವಾಡ

ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಒಡೆದು ನೀರು ಹರಿಯುತ್ತಿದ್ದ ಹೊಲ್ತಿಕೋಟಿ ಕೆರೆ ದುರಸ್ತಿ ಕಾರ್ಯ ಆರಂಭವಾಗಿದೆ.

ಸುಮಾರು 15 ಲಕ್ಷ ರೂ.ಗಳ ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ದುರಸ್ತಿ ಕಾರ್ಯ ನಿನ್ನೆಯಿಂದ ಆರಂಭವಾಗಿದೆ. ಇಂದು ಮಧ್ಯಾಹ್ನದಿಂದ ಹೊಲ್ತಿಕೋಟಿ ಭಾಗದಲ್ಲಿ ಮತ್ತೆ ಮಳೆ ಹಚ್ಚಾಗಿದ್ದು, ಈಗ ದುರಸ್ತಿ ಕಾರ್ಯ ನಿಧಾನವಾಗಿದೆ.

ಆದರೆ ಹರಿಯುತ್ತಿರುವ ನೀರು ಕೆರೆಯಲ್ಲಿ ಉಳಿಸಲು ಕ್ರಮ ವಹಿಸಲಾಗುತ್ತಿದೆ. ದುರಸ್ತಿ ಕಾರ್ಯವನ್ನು ತಕ್ಷಣಕ್ಕೆ ಕೈಗೊಳ್ಳಲಾಗುತ್ತಿದೆ. ಪೂರ್ಣಪ್ರಮಾಣದ ಕಾಮಗಾರಿ ಕೈಗೊಳ್ಳಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ವಾಕರಸಾಸಂ: ಇಂಧನ ಉಳಿತಾಯದಲ್ಲಿ ಕಾರ್ಯಕ್ಷಮತೆ ತೋರಿದವರಿಗೆ ಪ್ರಶಸ್ತಿ ಪ್ರದಾನ

eNewsLand Team

ಅಣ್ಣಿಗೇರಿ ಪುರಸಭೆ ಮತದಾನ : ಜಾತ್ರೆ, ಸಂತೆ ನಿಷೇಧ

eNewsLand Team

ಧಾರವಾಡ: ಸಮಾಜ ಕಲ್ಯಾಣ ಇಲಾಖೆ ವಿವಿಧ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

eNewsLand Team