35 C
Hubli
ಮಾರ್ಚ್ 28, 2023
eNews Land
ಜಿಲ್ಲೆ

ಹುಬ್ಬಳ್ಳಿಯಲ್ಲಿ ಪಂಜಾಬ್ ಸಿಎಂ ಚರಂಜಿತ್ ಶವಯಾತ್ರೆ!!

Listen to this article

ಇಎನ್ಎಲ್ ಧಾರವಾಡ:

ಪಂಜಾಬನಲ್ಲಿ ಪ್ರಧಾನಿ ಮೋದಿಗೆ ಭದ್ರತಾ ವೈಫಲ್ಯ‌ ಖಂಡಿಸಿ ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.

 

ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚೆನ್ನಿ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

200 ಕ್ಕೂ ಹೆಚ್ಚು ಕಾರ್ಯಕರ್ತರು ಜಮಾವಣೆಯಾಗಿ ಪ್ರತಿಭಟನೆ ಮಾಡಿದರು. ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಪಂಜಾಬ್ ಮುಖ್ಯಮಂತ್ರಿ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.

ಬಿಜೆಪಿ ಕಾರ್ಯಕರ್ತ ಮಂಜುನಾಥ ಹೆಬಸೂರ ಕಾಂಗ್ರೆಸ್ ಮುಖಂಡರ ಭಾವ ಚಿತ್ರಗಳಿಗೆ ಮಸಿ ಬಳಿಯುವ ಪ್ರಯತ್ನ ಮಾಡಿದರು.‌ ಆದರೆ ಪೊಲೀಸರು ಮಧ್ಯ ಪ್ರವೇಶಿಸಿ ತಡೆದರು. ಈ ವೇಳೆ ಪೊಲೀಸರು ಹಾಗೂ ಬಿಜೆಪಿಗರ ನಡುವೆ ವಾಗ್ವಾದ ನಡೆಯಿತು.

 

Related posts

ಹುಬ್ಬಳ್ಳಿಗೂ ಕಾಲಿಟ್ಟ ಹಿಜಾಬ್ ವಿವಾದ: ಪ್ರತಿಭಟನೆ

eNewsLand Team

ಬೈಪಾಸ್ ರಸ್ತೆ ಅಗಲೀಕರಣ ಕಾಲಮಿತಿಯೊಳಗೆ ಕಾಮಗಾರಿ-ಸಚಿವ ಹಾಲಪ್ಪ ಆಚಾರ್

eNewsLand Team

ಮಹಿಳೆ ಮೇಲೆ ಚಿರತೆ ದಾಳಿ

eNEWS LAND Team