23.8 C
Hubli
ಮಾರ್ಚ್ 28, 2023
eNews Land
ಜಿಲ್ಲೆ

ಮಳೆ: ಧಾರವಾಡದಲ್ಲಿ ಶಾಲೆಗೆ ರಜೆ ಘೋಷಣೆ

Listen to this article

ಇಎನ್ಎಲ್ ಧಾರವಾಡ:

ಜಿಲ್ಲೆಯಲ್ಲಿ ಗುರುವಾ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಶನಿವಾರವೂ ಮಳೆ ಮುಂದುವರಿಯುವುದಾಗಿ ಹವಾಮಾನ ಇಲಾಖೆ ವರದಿ ನೀಡಿದೆ. ಹೀಗಾಗಿ ಮುಂಜಾಗ್ರತೆಯಾಗಿ ನಾಳೆ, ನವೆಂಬರ 20 ರಂದು ಜಿಲ್ಲೆಯ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಇಂದು ಸಂಜೆ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಜಿಲ್ಲೆಯ ಎಲ್ಲ ಶಾಲಾ ಮುಖ್ಯಸ್ಥರಿಗೆ, ವಿದ್ಯಾರ್ಥಿ ಪಾಲಕರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.

23ರವರೆಗೆ ಮಳೆ ಮುಂದುವರಿಕೆ

ಜಿಲ್ಲೆಯಲ್ಲಿ ನಾಳೆಯಿಂದ (ನ.20 ರಿಂದ 23 ವರೆಗೆ) ಮುಂದಿನ ನಾಲ್ಕು ದಿನಗಳ ವರಗೆ ಈಗ ಆಗುತ್ತಿರುವ ಪ್ರಮಾಣದಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಜಿಲ್ಲಾಡಳಿತದಿಂದ ಮಳೆ ಹಾನಿ ತಡೆಯಲು ಅಗತ್ಯಕ್ರಮ ವಹಿಸಿದ್ದು, ಕೆರೆ ಕಟ್ಟೆಗಳ ಕಡೆ ಜನ, ಜಾನುವಾರ ಹೋಗದಂತೆ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕೆಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಧಾರವಾಡ ಎಸ್‍ಎಸ್‍ಎಲ್‍ಸಿ ಸಾಧಕರಿಗೆ ಸನ್ಮಾನಿಸಿ ಡಿಸಿ ಹೇಳಿದ್ದೇನು?

eNewsLand Team

ಶಿಗ್ಗಾಂವಿಯಲ್ಲಿ ಶೂಟ್; ಕತ್ತಲಲ್ಲಿ ಮನೆಯೊಳಗೆ ಓಡಿ ಬಚಾವಾದ ಸಲ್ಮಾ!!

eNewsLand Team

ಅಣ್ಣಿಗೇರಿಲಿ ಅನ್ನದಾತನ ಆತ್ಮಹತ್ಯೆ; ಸಾಯುವಂಥದ್ದು ಏನಾಗಿತ್ತು?

eNewsLand Team