22 C
Hubli
ಡಿಸೆಂಬರ್ 7, 2023
eNews Land
ಆರೋಗ್ಯ

ಡಿಸಿಯಿಂದ ಮುಚ್ಚಳಿಕೆ ಬರೆಸಿಕೊಂಡು ಲಸಿಕೆ ಹಾಕಿಸಿಕೊಂಡ ಭೂಪ!

ಇಎನ್ಎಲ್ ಧಾರವಾಡ:  ‘ಕೋವಿಡ್ ಲಸಿಕೆಯಿಂದ ನಿಮ್ಮ ಆರೋಗ್ಯದಲ್ಲಿ ಹೆಚ್ಚು ಕಡಿಮೆಯಾದರೆ ನಾವೇ ಜವಾಬ್ದಾರಿ. ಲಸಿಕೆ ತಗೊಳ್ಳಿ!

ಯಲ್ಲಾಪುರ ಓಣಿ ನಿವಾಸಿ ಆನಂದ ಕೊನ್ನೂರಕರ ಎಂಬುವವರಿಗೆ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಮತ್ತು ಜಿಲ್ಲಾ ಪಂಚಾಯಿತಿ ಬರೆದುಕೊಟ್ಟ ಮುಚ್ಚಳಿಕೆ ಇದು. ಅಷ್ಟೇ ಅಲ್ಲ, ಅವರಿಗೆ ವಿಶ್ವಾಸ ಮೂಡಿಸಿ ಕೋವ್ಯಾಕ್ಸಿನ್ ಲಸಿಕೆಯನ್ನೂ ನೀಡಲಾಯಿತು.

ಜಿಲ್ಲೆಯಲ್ಲಿ ಕೋವಿಡ್ ಉಲ್ಬಣಗೊಂಡ ಕಾರಣ ಜಿಲ್ಲಾಧಿಕಾರಿ ಇಲ್ಲಿನ ಮಹಾನಗರ ಪಾಲಿಕೆಯಲ್ಲಿ ಜಿಲ್ಲಾಧಿಕಾರಿ ಧಾರ್ಮಿಕ ಮುಖಂಡರ ಸಭೆ ನಡೆಸಿದರು. ಈ ವೇಳೆ ಎದ್ದುನಿಂತ ಆನಂದ, ನಮ್ಮ ಕುಟುಂಬ ಸದಸ್ಯರು ಈಗಾಗಲೇ ಲಸಿಕೆ ಪಡೆದಿದ್ದಾರೆ. ನಾನು ಲಸಿಕೆ ಪಡೆದರೆ ಹೆಚ್ಚು ಕಡಿಮೆಯಾದರೆ ಎನ್ನುವ ಭಯ ಕಾಡುತ್ತಿದೆ. ನನಗೆ ಏನಾದರೂ ಆದರೆ ಕುಟುಂಬದ ಕಥೆಯೇನು? ಜಿಲ್ಲಾಡಳಿತವೇ ಜವಾಬ್ದಾರಿ ವಹಿಸಿಕೊಳ್ಳುತ್ತದೆ ಎಂದು ಬರೆದುಕೊಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿ ಹೇಳುವ ಪ್ರಯತ್ನ ನಡೆಸಿದರೂ ಪ್ರಯೋಜನವಾಗಿಲ್ಲ. ಪಾಲಿಕೆ ಆಯುಕ್ತ ಸುರೇಶ ಇಟ್ನಾಳ್ ಲಸಿಕೆಯಿಂದ ಅಡ್ಡ ಪರಿಣಾಮ ಅಥವಾ ದುಷ್ಪರಿಣಾಮ ಉಂಟಾದರೆ ನಾವು ಜವಾಬ್ದಾರಿ ವಹಿಸಿಕೊಳ್ಳುತ್ತೇವೆ ಎಂದು ಮುಚ್ಚಳಿಕೆ ಬರೆದು ಕೊಡುತ್ತೇವೆ’ ಎಂದರು. ಜಿಲ್ಲಾಧಿಕಾರಿ ಸೂಚನೆಯಂತೆ ತಕಣ ಸಿಬ್ಬಂದಿಯಿಂದ ಮುಚ್ಚಳಿಕೆ ಪತ್ರ ಬರೆಸಿ ಅದಕ್ಕೆ  ಸಹಿ ಹಾಕಿದರು.

ಜಿಲ್ಲಾ ಪಂಚಾಯಿತಿ ಸಿಇಒ, ಉಪ ವಿಭಾಗಾಧಿಕಾರಿ ಕೂಡ ಸಹಿ ಹಾಕಿ ಪತ್ರ ನೀಡಿದರು. ಅಲ್ಲದೆ, ಬಳಿಕ ಆನಂದ ಅವರಿಗೆ ಕೋಟ್ಯಾಕ್ಸಿನ್ ಲಸಿಕೆ ಹಾಕಿಸಲಾಯಿತು.

Related posts

ಕರ್ನಾಟಕದ ಮೂಲಕ ದೇಶಕ್ಕೆ ಒಮಿಕ್ರಾನ್ ಎಂಟ್ರಿ! ಇನ್ಮೇಲಾದ್ರೂ ಹುಷಾರಾಗಿರಿ

eNewsLand Team

ರಾಜ್ಯದಲ್ಲಿ ಒಮಿಕ್ರಾನ್ ಕುರಿತು ತಜ್ಞರ ಸಭೆ ನಾಳೆ, ಹೊಸ ಮಾರ್ಗಸೂಚಿ ಜಾರಿಗೆ ಕ್ರಮ: ಬೊಮ್ಮಾಯಿ‌

eNewsLand Team

ರಾಜ್ಯಕ್ಕೆ ಹೆಲ್ತ್ ವಿಷನ್ ದಾಖಲೆ ರೂಪಿಸಲಾಗುವುದು : ಸಿಎಂ

eNewsLand Team