22 C
Hubli
ಏಪ್ರಿಲ್ 20, 2024
eNews Land
ಆರೋಗ್ಯ ಸುದ್ದಿ

ಕಿಮ್ಸ್‌ನಲ್ಲಿ ಪ್ರಥಮ ಬಾರಿಗೆ ಯಶಸ್ವಿ ತೆರೆದ ಹೃದಯ ಚಿಕಿತ್ಸೆ: ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂತರತಾನಿ

ಇಎನ್ಎಲ್ ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಲ್ಲಿ ಪ್ರಥಮ ಬಾರಿಗೆ ಯಶಸ್ವಿ ತೆರೆದ ಹೃದಯ ಚಿಕಿತ್ಸೆ ಮಾಡಲಾಗಿದ್ದು, ಆ ಮೂಲಕ ಸರ್ಕಾರಿ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಯಶಸ್ವಿ ತೆರೆದ ಹೃದಯ ಶಸ್ತ್ರ ಚಿಕಿತ್ಸೆಯನ್ನು ಮಾಡಿದ ಕೀರ್ತಿ ಕಿಮ್ಸ್ ಗೆ ದೊರೆತಿದೆ ಎಂದು ಕಿಮ್ಸ್ ನಿರ್ದೇಶಕರಾದ ಡಾ.ರಾಮಲಿಂಗಪ್ಪ ಅಂತರಠಾಣಿ ಹೇಳಿದರು.

ಇದನ್ನು ಓದಿ:30.33 ಅನಧಿಕೃತ ಬೀಜ ದಾಸ್ತಾನು ಜಪ್ತಿ; ಪ್ರಕರಣ ದಾಖಲು

ಹುಬ್ಬಳ್ಳಿಯ ಕಿಮ್ಸ್ ಸುವರ್ಣ ಮಹೋತ್ಸವ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.

ಇದನ್ನು ಓದಿ:ಮೋದಿ ಮೋದಿಯೇ ನೆಹರು ನೆಹರುನೇ‌ ಎಂದು ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟಾಂಗ್

68 ವರ್ಷದ ಗಂಗಮ್ಮ ಶಿರೋಳ ಎಂಬುವವರಿಗೆ ಎದೆನೋವು ಹಾಗೂ ಲಘು ಹೃದಯಾಘಾತವಾಗಿತ್ತು. ಅವರನ್ನು ಬೆಂಗಳೂರಿನ ಜಯದೇವ ಆಸ್ಪತ್ರೆ ಅಥವಾ ಬೇರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಸೂಚಿಸಲಾಗಿತ್ತು. ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ, ಡಾ. ಉಲ್ಲಾಸ್ ಬಿಸಲೇರಿ ಹಾಗೂ ಅವರ ತಂಡದಿಂದ ಯಶಸ್ವಿಯಾಗಿ ಬೈಪಾಸ್ ಸರ್ಜರಿ ಮಾಡಲಾಯಿತು. 31 ವರ್ಷದ ನಾಗೇಶ ಮಾದರ ಎಂಬುವವರು ಉಸಿರಾಟ ಸಮಸ್ಯೆಯನ್ನು ಎದುರಿಸುತ್ತಿದ್ದರು. ತಪಾಸಣೆಗೆ ಒಳಪಡಿಸಿದಾಗ ಹೃದಯದಲ್ಲಿ ರಂಧ್ರವಿರುವುದು ಕಂಡು ಬಂದಿತ್ತು,ನಂತರ ಅವರಿಗೆ ಸರ್ಜರಿ ಮಾಡಲಾಯಿತು ಈಗ ಇಬ್ಬರೂ ಆರೋಗ್ಯದಿಂದ ಇದ್ದಾರೆ ಎಂದರು.

ಇದನ್ನು ಓದಿ:ಶಿಗ್ಗಾಂವಿಯಲ್ಲಿ ಶೂಟ್; ಕತ್ತಲಲ್ಲಿ ಮನೆಯೊಳಗೆ ಓಡಿ ಬಚಾವಾದ ಸಲ್ಮಾ!!

ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ, ಡಾ. ಅರುಣ ಕುಮಾರ, ಡಾ.ಹೊಸಮನಿ, ಡಾ. ಗುರುಶಾಂತಪ್ಪ, ಡಾ. ರಾಜಶೇಖರ ದ್ಯಾಬೇರಿ, ಡಾ. ನಾಗೇಂದ್ರ ಹಿರೇಗೌಡರ, ಡಾ. ರಾಜಕುಮಾರ, ಡಾ.ಉಮೇಶ ಬೀಳಗಿ, ಡಾ.ಸುರೇಶ, ಡಾ. ನಿತೀನ್ ಕಡಕೋಳ, ಡಾ.ಬಳಿಗಾರ, ಡಾ. ಪ್ರಶಾಂತ ಹಾಗೂ ಅನಸ್ತೇಸಿಯಾ ತಂಡದ ಡಾ.ಮಾಧುರಿ, ಡಾ.ಆಲೂರ, ಡಾ.ವಿದ್ಯಾ ಹಾಗೂ ವಿದ್ಯಾರ್ಥಿಗಳ ತಂಡ ಈ ಸಾಧನೆ ಮಾಡಿದೆ. ಡಾ. ಅರವಿಂದ, ಡಾ. ರಾಜಶೇಖರ ಹಾಗೂ ಶುಶ್ರೂಷಕಿ ಕಮಲಾ ಅವರು ತುರ್ತು ನಿಗಾ ಘಟಕದಲ್ಲಿ ಉತ್ತಮವಾಗಿ ರೋಗಿಗಳನ್ನು ನೋಡಿಕೊಂಡಿದ್ದರು. ನರ್ಸ್ ಗಳು ಉತ್ತಮ ರೀತಿಯಲ್ಲಿ ಸ್ಪಂದಿಸಿದರು ಎಂದು ಕೃತಜ್ಞತೆ ತಿಳಿಸಿದರು.

ಇದನ್ನು ಓದಿ:ಸನ್ನಡತೆ; ಐದು ಜೈಲು ಹಕ್ಕಿಗಳೀಗ ಫ್ರೀ ಬರ್ಡ್ಸ್!! ಯಾರವರು??

ಸುದ್ದಿಗೋಷ್ಠಿಯಲ್ಲಿ ಡಾ.ಉಲ್ಲಾಸ ಬೀಳಗಿ, ಡಾ.ರಾಜಶೇಖರ ದ್ಯಾಬೇರಿ, ಡಾ.ನಾಗೇಂದ್ರ ಹಿರೇಗೌಡರ, ಡಾ. ಮಾಧುರಿ, ಡಾ. ವಿದ್ಯಾ, ಡಾ.ಹೊಸಮನಿ, ಶುಶ್ರೂಷಕರಾದ ವಿಜಯ, ಅನಿಲ, ಸುನೀಲ, ಹಾಲೇಶ, ಸತೀಶ್, ಶಿಲ್ಪಾ, ಅನಿತಾ, ಸಹನಾ ಹಾಗೂ ಇತರ ತಜ್ಞವೈದ್ಯರು ಉಪಸ್ಥಿತರಿದ್ದರು.

ಇದನ್ನು ಓದಿ:ದ ಕಾಶ್ಮೀರ ಫೈಲ್ಸ್: ಕಲಾವಿದೆಗೆ ಗುಂಡಿಕ್ಕಿದ ನರರಾಕ್ಷಸರು!!

 

Related posts

ಜಗದೀಶ್ ಶೆಟ್ಟರ್ ಅವರನ್ನು ನಾಡಿನ ಜನತೆ ಕ್ಷಮಿಸುವುದಿಲ್ಲ: ಬಿ.ಎಸ್.ಯಡಿಯೂರಪ್ಪ

eNEWS LAND Team

ಜಮೀರ್ ಬಸ್ ಒರೆಸಿಕೊಂಡು ಇದ್ದ, ಶಾಸಕನಾಗಿ ಮಾಡಿದ್ದು ಹೆಚ್ಡಿಕೆ….

eNEWS LAND Team

₹12,795 ಕೋಟಿ ವೆಚ್ಚದ 925 ಕಿ.ಮೀ.ಉದ್ದದ ರಾಷ್ಟ್ರೀಯ ಹೆದ್ದಾರಿ ಭೂಮಿ ಪೂಜೆ

eNEWS LAND Team