37 C
Hubli
ಮಾರ್ಚ್ 28, 2024
eNews Land
ಕೃಷಿ ದೇಶ ರಾಜ್ಯ

ಮುಂಗಾರು ಮಳೆ ಬೇಗ ಬರುತ್ತೆ ; ಹವಾಮಾನ ಇಲಾಖೆ

ಮೇ 27ರಂದೇ ಕೇರಳವನ್ನು ಪ್ರವೇಶಿಸುವ ಸಾಧ್ಯತೆ

ಇಎನ್ಎಲ್ ನವದೆಹಲಿ: ಮುಂಗಾರು ಮಳೆ ಈ ಬಾರಿ ವಾಡಿಕೆಗೆ ಮುನ್ನವೇ ಕೇರಳ ರಾಜ್ಯ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಸಾಮಾನ್ಯವಾಗಿ ಪ್ರತಿ ವರ್ಷ ಜೂನ್ 1ರಂದು ನೈರುತ್ಯ ಮುಂಗಾರು ಕೇರಳ ಪ್ರವೇಶಿಸುತ್ತದೆ. ಪ್ರಸಕ್ತ ವರ್ಷ 5 ದಿನ ಮೊದಲೇ ಅಂದರೆ ಮೇ 27ರಂದೇ ಕೇರಳವನ್ನು ಪ್ರವೇಶಿಸುವ ಸಾಧ್ಯತೆ ಇದೆ. ( 2009ರಲ್ಲಿ ನೈಋತ್ಯ ಮಾನ್ಸೂನ್‌ ಮೇ 23ರಂದು ಕೇರಳ ಪ್ರವೇಶಿಸಿತ್ತು.)

ಹಾಗೆಯೇ ನೈರುತ್ಯ ಮುಂಗಾರು ಮಾರುತವು ಮೇ 15ರಂದು ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಗಳನ್ನು ಪ್ರವೇಶಿಸಿ, ಮುಂದುವರಿಯಲು ಪೂರಕ ವಾತಾವರಣ ಸೃಷ್ಟಿಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ವಾಯವ್ಯ ಭಾರತದ ಕೆಲವು ಪ್ರದೇಶಗಳಲ್ಲಿ ಬಿಸಿಲ ಧಗೆ ಹೆಚ್ಚುತ್ತಿರುವ ಸಮಯದಲ್ಲೇ ಅವಧಿಪೂರ್ವ ಮುಂಗಾರು ಆರಂಭದ ಸುಳಿವು ಲಭ್ಯವಾಗಿದೆ.

Related posts

ರಾಜ್ಯದ ಯಶೋಗಾಥೆಯಲ್ಲಿ ಭಾಗಿಯಾಗಿ: ಹೂಡಿಕೆದಾರರಿಗೆ ಮುಖ್ಯಮಂತ್ರಿ ಆಹ್ವಾನ

eNewsLand Team

ಮೇ 10ರಂದು ವಿಧಾನಸಭೆ ಚುನಾವಣೆ

eNEWS LAND Team

ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ

eNEWS LAND Team