23 C
Hubli
ಸೆಪ್ಟೆಂಬರ್ 25, 2023
eNews Land
ದೇಶ

ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್‌ಗೆ ‘ವೀರಚಕ್ರ’ ಪ್ರದಾನ

ಇಎನ್ಎಲ್ ಬ್ಯೂರೋ

ದೆಹಲಿ:ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್, ಬಾಲಾಕೋಟ್ ವೈಮಾನಿಕ ದಾಳಿಯ ಹೀರೋ ಅಭಿನಂದನ್ ವರ್ಧಮಾನ್‌ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ‘ವೀರಚಕ್ರ’ ಪ್ರದಾನ ಮಾಡಿದರು.

ವಿಂಗ್ ಕಮಾಂಡರ್ ಆಗಿದ್ದ ಅಭಿನಂದನ್ ಅವರು 2019ರ ಫೆಬ್ರುವರಿ 27ರಂದು ಭಾರತದ ವಾಯುಗಡಿ ದಾಟಿ ಬಂದಿದ್ದ ಪಾಕಿಸ್ತಾನದ ಎಫ್‌–16 ಯುದ್ಧ ವಿಮಾನಗಳನ್ನು ಮಿಗ್‌–21 ಯುದ್ಧ ವಿಮಾನದ ಮೂಲಕ ಬೆನ್ನಟ್ಟಿ ಹೋಗಿ ಹೊಡೆದುರುಳಿಸಿದ್ದರು.

ಬಳಿಕ ಮಿಗ್‌–21 ಯುದ್ಧ ವಿಮಾನ ಪತನಗೊಂಡಿದ್ದರಿಂದ ಪಾಕಿಸ್ತಾನಕ್ಕೆ ಸೆರೆ ಸಿಕ್ಕಿದ್ದರು. ಭಾರತ ಸರ್ಕಾರ ಮತ್ತು ಅಂತಾರಾಷ್ಟ್ರೀಯ ಸಮುದಾಯದ ತೀವ್ರ ಒತ್ತಡದ ಹಿನ್ನೆಲೆಯಲ್ಲಿ ಅವರನ್ನು ಮಾರ್ಚ್‌ 1ರ ರಾತ್ರಿ ಪಾಕಿಸ್ತಾನ ಬಿಡುಗಡೆ ಮಾಡಿತ್ತು. ಬಾಲಾಕೋಟ್ ದಾಳಿಯ ಸಂದರ್ಭದಲ್ಲಿ ಪ್ರದರ್ಶಿಸಿದ ಸಾಹಸಕ್ಕಾಗಿ ಅಭಿನಂದನ್ ಅವರಿಗೆ ಈ ಹಿಂದೆಯೇ ಶೌರ್ಯಚಕ್ರ ನೀಡಿ ಗೌರವಿಸಲಾಗಿದೆ.

ಇತ್ತೀಚೆಗಷ್ಟೇ ಅವರಿಗೆ ಗ್ರೂಪ್ ಕ್ಯಾಪ್ಟನ್ ಆಗಿ ಬಡ್ತಿ ನೀಡಲಾಗಿತ್ತು.
ಇದು ಭಾರತೀಯ ಭೂ ಸೇನಾಪಡೆ ಕರ್ನಲ್‌ ಶ್ರೇಣಿಗೆ ಸಮನಾದ ಹುದ್ದೆಯಾಗಿದೆ.

Related posts

ಕೇಂದ್ರ ಸರ್ಕಾರದಿಂದ ದೇಶದ ಮೊದಲ ವರ್ಚುವಲ್ ಸೈನ್ಸ್ ಲ್ಯಾಬ್ ಅನಾವರಣ!

eNewsLand Team

ವ್ಯವಹಾರ ಕುದುರಿಸಲು ಲಂಚ: 82ನೇ ಸ್ಥಾನದಲ್ಲಿ ಭಾರತ

eNewsLand Team

ಕೂಡಲಸಂಗಮ ಭೇಟಿ ನೀಡಿದ ರಾಹುಲ್ ಗಾಂಧಿ!

eNEWS LAND Team