30 C
Hubli
ಮಾರ್ಚ್ 21, 2023
eNews Land
ದೇಶ ಸುದ್ದಿ

ಸೇನಾ ಹೆಲಿಕಾಪ್ಟರ್ ಪತನ; ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸ್ಥಿತಿ ಗಂಭೀರ

Listen to this article

ಇಎನ್ಎಲ್ ಡೆಸ್ಕ್

ಚೆನ್ನೈ: ತಮಿಳುನಾಡಿನ ಕುನೂರಿನಲ್ಲಿ ಸೇನಾ ಹೆಲಿಕಾಪ್ಟರ್ MI17-V5 ಪತನಗೊಂಡಿದ್ದು, ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸ್ಥಿತಿ ಗಂಭೀರವಾಗಿದ್ದು, ಕೊಯಿಮತ್ತೂರು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈವರೆಗೆ 11 ಅಧಿಕಾರಿಗಳು ಮೃತಪಟ್ಟಿದ್ದು, ನಾಲ್ವರ ಮೃತದೇಹ ಪತ್ತೆಯಾಗಿದೆ. ರಾವತ್ ಅವರ ಪತ್ನಿ ಮಧುಲಿಕಾ ಕೂಡ ಮೃತಪಟ್ಟಿದ್ದಾರೆ. ಈವರೆಗೆ ಮೂವರನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ಶೋಧಕಾರ್ಯ ನಡೆಯುತ್ತಿದೆ. ಒಂದೂವರೆ ಗಂಟೆಗಳ ಕಾಲ ತೆಗೆದುಕೊಂಡು ಬೆಂಕಿ ನಂದಿಸಲಾಗಿದೆ.

 

 

ಸೇನೆಯ ಎರಡು ಹೆಲಿಕಾಪ್ಟರ್‌ಗಳು ಬುಧವಾರ ಕೊಯಮತ್ತೂರಿನಿಂದ ವೆಲ್ಲಿಂಗ್ಟನ್ ಸೇನಾ ಕೇಂದ್ರಕ್ಕೆ ಹೋಗುತ್ತಿದ್ದವು. ರಾವತ್ ಅವರು ಉಪನ್ಯಾಸ ನೀಡಲು ಹೆಲಿಕಾಪ್ಟರ್ ಮೂಲಕ ತೆರಳುತ್ತಿದ್ದರು. ಅವರ ಹೆಲಿಕಾಪ್ಟರ್ ಪತನಗೊಂಡಿದ್ದು, ಇದರಲ್ಲಿ 14 ಅಧಿಕಾರಿಗಳು ಪ್ರಯಾಣಿಸುತ್ತಿದ್ದರು.

ಈವರೆಗೆ ಏಕಾಏಕಿ ಹವಾಮಾನ ವೈಪರೀತ್ಯ ಕಾರಣದಿಂದ ಹೆಲಿಕಾಪ್ಟರ್ ಪತನಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೇವಲ ಐದು ನಿಮಿಷದಲ್ಲಿ ಕ್ಯಾಪ್ಟರ್ ಲ್ಯಾಂಡ್ ಆಗಬೇಕಿತ್ತು. ಹೆಲಿಪ್ಯಾಡ್ ಕೇವಲ ಹತ್ತು ಕಿಮೀ ದೂರದಲ್ಲಿ ಹೆಲಿಕಾಪ್ಟರ್ ಪತನವಾಗಿದೆ.

ರಾವತ್ ಅವರಿಗೆ ಶೇ. 80ಕ್ಕೂ ಹೆಚ್ಚು ಸುಟ್ಟ ಗಾಯವಾಗಿದೆ ಎನ್ನಲಾಗಿದೆ. ಮೂವರಿಗೆ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬುದು ಸದ್ಯದ ಮಾಹಿತಿ.

ಘಟನಾ ಸ್ಥಳಕ್ಕೆ ವಾಯುಸೇನಾ ಮುಖ್ಯಸ್ಥ ವಿವೇಕ ರಾಮ್ ಚೌಧರಿ ಆಗಮಿಸುತ್ತಿದ್ದಾರೆ. ದುರ್ಘಟನೆಗೆ ಇಡೀ ದೇಶ ಮರುಗುವಂತಾಗಿದೆ.

Related posts

ಕಡಲೆ ಖರೀದಿ ಕೇಂದ್ರ ತೆರೆಯಲು ಆಗ್ರಹಿಸಿ ಅಮರಣ ಉಪವಾಸ ಸತ್ಯಾಗ್ರಹ

eNEWS LAND Team

ತಂದೆ-ತಾಯಿ ಜೀವಂತ ದೇವರು ಪೂಜ್ಯತೆಯಿಂದ ಕಾಣಿರಿ : ಬಸವಲಿಂಗಸ್ವಾಮಿ

eNEWS LAND Team

ವಕೀಲರ ಆರ್ಥಿಕ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಂಘದ ಕಾರ್ಯ ಶ್ಲಾಘನೀಯ -ನ್ಯಾಯಮೂರ್ತಿ ರವಿ ವಿ. ಹೊಸಮನಿ

eNewsLand Team