22 C
Hubli
ಮಾರ್ಚ್ 24, 2023
eNews Land
ಸುದ್ದಿ

ಪೆಟ್ರೊಲ್, ಡಿಸೇಲ್, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಆಟೋ ರಿಕ್ಷಾ ಚಾಲಕರ ಸಂಘದಿಂದ ಪ್ರತಿಭಟನೆ

Listen to this article
ಇಎನ್ಎಲ್ ಹುಬ್ಬಳ್ಳಿ
ಪೆಟ್ರೊಲ್, ಡಿಸೇಲ್, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಉತ್ತರ ಕರ್ನಾಟಕ ಆಟೋ ರಿಕ್ಷ ಚಾಲಕರ ಸಂಘದ ಪದಾಕಾರಿಗಳು ಸೋಮವಾರ ಪ್ರತಿಭಟನಾ ರ್ಯಾಲಿ ನಡೆಸಿದರು.
ಇಲ್ಲಿಯ ನಿಲಿಜನ್ ರಸ್ತೆಯಿಂದ ಚನ್ನಮ್ಮ ವೃತ್ತ, ಸಂಗೊಳ್ಳ ರಾಯಣ್ಣ ವೃತ್ತದ ಮುಖಾಂತರ ತಹಸೀಲ್ದಾರ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು, ತಹಸೀಲ್ದಾರ ಕಚೇರಿ ಎದುರು ಕೆಲಹೊತ್ತು ಪ್ರತಿಭಟನೆ ನಡೆಸಿದರು. ಬಳಿಕ ತಹಸೀಲ್ದಾರ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದರು. ಅಲ್ಲದೇ, ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಿರಂತರವಾಗಿ ಬೆಲೆ ಏರಿಕೆ ಆಗುತ್ತಿರುವುದರಿಂದ ಬಡವರು, ಮಧ್ಯಮ ವರ್ಗದ ಜನರು ಉಪಜೀವನ ಸಾಗಿಸುವುದು ಕಷ್ಟವಾಗುತ್ತಿದೆ. ಕೋವಿಡ್‌ನಿಂದ ಉಂಟಾದ ಲಾಕ್‌ಡೌನ್ ಪ್ರಭಾವದಿಂದ ಈಗಷ್ಟೇ ಚೇತರಿಕೆ ಕಾಣುತ್ತಿವೆ. ಈಗಾಗಲೇ ದುಡಿಯುವ ಕೈಗಳು ಉದ್ಯೋಗ ಕಳೆದುಕೊಂಡಿವೆ. ಈ ಮಧ್ಯ ಉತ್ತರ ಕರ್ನಾಟಕದ ೫೦ ಲಕ್ಷ ಜನರು ಜೀವನೋಪಾಯಕ್ಕೆ ಕಾರಣವಾಗಿರುವ ಆಟೋ ರೀಕ್ಷಾಗಳ ಇಂಧನ(ಎಲ್‌ಪಿಜಿ) ಬೆಲೆ ಏರಿಕೆಯಿಂದ ಸಾಕಷ್ಟು ತೊಂದರೆ ಉಂಟಾಗುತ್ತಿದ್ದು, ಬೆಲೆ ಇಳಿಕೆ ಮಾಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ, ರಫೀಕ್ ಕುಂದಗೋಳ, ದಾವುದಲಿ ಶೇಖ, ಮುರಳಿ ಇಂಗಳಹಳ್ಳಿ ಕಲ್ಲಪ್ಪ ಅಣ್ಣಿಗೇರಿ, ಜಾಫರ್ ಕೆರೂರ, ಚಂದ್ರಗೌಡ ಪಾಟೀಲ ಸೇರಿದಂತೆ ಇತರರು ಇದ್ದರು.

Related posts

ಕ್ಯಾನ್ಸರ್ ಜಾಗೃತಿ; ಹುಬ್ಬಳ್ಳಿಯಲ್ಲಿ ಸೈಕ್ಲಾಥಾನ್

eNewsLand Team

ಧಾರವಾಡ ಆಧಾರ್ ಕೇಂದ್ರ ಸ್ಥಾಪನೆ, ಅಲ್ಲಿ ಇಲ್ಲಿ ಅಲೆಯೋ ಅಗತ್ಯವಿಲ್ಲ.. ಇಲ್ಲೇ ಬನ್ನಿ !!

eNEWS LAND Team

ಖಾಸಗಿ, ಸರ್ಕಾರಿ,ಅರೆ ಸರ್ಕಾರಿ ಉದ್ಯೋಗ ಕನ್ನಡಿಗರಿಗೇ : ಸಿಎಂ ಬೊಮ್ಮಾಯಿ

eNEWS LAND Team