26 C
Hubli
ಏಪ್ರಿಲ್ 27, 2024
eNews Land
ಸುದ್ದಿ

ಬಿಜೆಪಿಗೆ‌ ಠಕ್ಕರ್ ಕೊಡಲು ಕಾಂಗ್ರೆಸ್ ಪ್ಲಾನ್!! ಇವತ್ತು ಏನ್ ಮಾಡ್ತಿದಾರೆ ಗೊತ್ತಾ?

ಇಎನ್ಎಲ್ ಧಾರವಾಡ: ಮಂಗಳವಾರ ಒಂದು ಕಡೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದರೆ, ಇನ್ನೊಂದು ಕಡೆ ಕಾಂಗ್ರೆಸ್ ಕಮಲ ಪಾಳಯಕ್ಕೆ ಠಕ್ಕರ್ ನೀಡಲು ಮುಂದಾಗಿದೆ.

ಹುಬ್ಬಳ್ಳಿಯನ್ನು ಧೂಳು ಮುಕ್ತ ನಗರ ಹಾಗೂ ಸಮರ್ಪಕ ಕಸ ವಿಲೇವಾರಿಗೆ ಆಗ್ರಹಿಸಿ ಹು.ಧಾ.ಮ. ಪಾಲಿಕೆ ಕಚೇರಿಯ ಎದುರಿಗೆ ಮಹಾನಗರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಲಿದೆ.

ಬೆಳಗ್ಗೆ 10 ಗಂಟೆಗೆ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ,ಧೂಳು ಮುಕ್ತ ನಗರ ಹಾಗೂ ಸಮರ್ಪಕ ಕಸ ವಿಲೇವಾರಿಗೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಶಾಸಕರು,ಮಾಜಿ ಶಾಸಕರು, ಮಾಜಿ ಸಂಸದರು,ಕೆಪಿಸಿಸಿ ಮಾಜಿ ಪದಾಧಿಕಾರಿಗಳು, ಕೆಪಿಸಿಸಿ ಸಂಯೋಜಕರು, ಪಾಲಿಕೆ ಸದಸ್ಯರು, ಬ್ಲಾಕ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಮುಂಚೂಣಿ ಘಟಕ/ವಿಭಾಗ/ಸೆಲ್ ಗಳ ಅಧ್ಯಕ್ಷರು, ಪಕ್ಷದ ಯಾವತ್ತೂ ಮುಖಂಡರು ಸೇರಿದಂತೆ ಕಾಂಗ್ರೆಸ್ ಪಕ್ಷದ ಸಮಸ್ತ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫಹುಸೇನ್ ಹಳ್ಳೂರ ಅವರು ಕೋರಿದ್ದಾರೆ.

Related posts

ಜನರ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

eNEWS LAND Team

ಮುಸ್ಲಿಮರಿಗೆ ಅಂಗಡಿ ವ್ಯಾಪಾರಕ್ಕೆ ಅವಕಾಶವಿಲ್ಲ; ಬೊಮ್ಮಾಯಿ ಹೇಳಿದ್ದೇನು ಗೊತ್ತಾ?

eNEWS LAND Team

ಸಿಎಂ ಬದಲಾವಣೆ ಬಿಜೆಪಿ ನಕ್ಷತ್ರದಲ್ಲಿದೆ : ಬಿ.ಕೆ. ಹರಿಪ್ರಸಾದ್ ವ್ಯಂಗ್ಯ

eNEWS LAND Team