ಇಎನ್ಎಲ್ ಧಾರವಾಡ: ಅಪ್ರಾಪ್ತ ಬಾಲಕಿಯನ್ನು ಅಪ್ರಾಪ್ತ ವಯಸ್ಕರು ನಗರದ ಹೊರವಲಯಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣ ನಡೆದಿದ್ದು, ಧಾರವಾಡ ಬೆಚ್ಚಿಬಿದ್ದಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ.
ಇಲ್ಲಿನ ಲಕ್ಷ್ಮೀಸಿಂಗನಕೇರಿಯ ಅಪ್ರಾಪ್ತಳ ಮೇಲೆ ಅದೇ ಬಡಾವಣೆಯ ಐವರು ಯುವಕರು ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.
ಬಾಸೆಲ್ ಮಿಶನ್ ಕಾಲೇಜಿನ ವಿದ್ಯಾರ್ಥಿನಿಯಾದ ಬಾಲಕಿಯನ್ನು ನಗರದ ಹೊರವಲಯಕ್ಕೆ ಒತ್ತಾಯದಿಂದ ಕರೆದುಕೊಂಡು ಹೋದ ಅಪ್ರಾಪ್ತ ಯುವಕರು, ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ಈ ಕುರಿತು ಶಹರ ಠಾಣೆಯ ಪೊಲೀಸರು ತನಿಖೆ ಕೈಕೊಂಡಿದ್ದಾರೆ. ವಿದ್ಯಾಕಾಶಿಯಲ್ಲಿ ನಡೆದಿರುವಂತಹ ಘಟನೆ ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ.