22 C
Hubli
ಏಪ್ರಿಲ್ 20, 2024
eNews Land
ಸುದ್ದಿ

ರೆಡ್ ರೋಸ್ ಕೊಡಲು ಹೋಗಿ, ಪೊಲೀಸರ ಅತಿಥಿಯಾದ ಕಾಂಗ್ರೆಸಿಗರು

ಇಎನ್ಎಲ್ ಹುಬ್ಬಳ್ಳಿ: ಕಲಾಪ ನಡೆಸಲು‌ ಅಡ್ಡಿಯಾದ ಕಾಂಗ್ರೆಸ್ ಧೋರಣೆ ಖಂಡಿಸಿ ಬಿಜೆಪಿ ಪ್ರತಿಭಟನಾ ಸಭೆ ಕೈಬಿಟ್ಟು ಆಡಳಿತ ಪಕ್ಷವಾಗಿ ತನ್ನ ಜವಾಬ್ದಾರಿ ಅರಿತುಕೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ಇತರೆ ಮುಖಂಡರಿಗೆ ಗುಲಾಬಿ ಹೂವು ಕೊಡಲು ಮುಂದಾದ ಕಾಂಗ್ರೆಸ್ ಕಾರ್ಯಕರ್ತರನ್ನು ಉಪನಗರ ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದರು.

ಇಲ್ಲಿನ ದೇಶಪಾಂಡೆ ನಗರದ ಶ್ರೀಕೃಷ್ಣ ಕಲ್ಯಾಣ ಮಂಟಪದಲ್ಲಿ ಶನಿವಾರ ಸಂಜೆ ಬಿಜೆಪಿಯಿಂದ ಆಯೋಜಿಸಿದ್ದ ಪ್ರತಿಭಟನಾ ಸಭೆಗೆ ಬರುತ್ತಿದ್ದ ಮುಖಂಡರನ್ನು ರಸ್ತೆಯಲ್ಲಿ ತಡೆದು ಗುಲಾಬಿ ಹೂವು ನೀಡಲು ಪ್ರವಾಸಿ ಮಂದಿರ ಹಿಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ್ದರು.

ಮಾಜಿ ಮೇಯರ್ ಪಾಂಡುರಂಗ ಪಾಟೀಲ್, ಡಿ.ಕೆ.ಚೌಹಾಣ್ ಅವರಿಗೆ ಹೂವನ್ನು ಕಾಂಗ್ರೆಸ್ಸಿಗರು ನೀಡಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಸಾಂಕೇತಿಕವಾಗಿ ಹೂವು ಕೊಟ್ಟಿದ್ದೀರಿ, ಇಲ್ಲಿಗೆ ಮುಕ್ತಾಯ ಮಾಡುವಂತೆ ಮನವಿ ಮಾಡಿದರು. ಆದರೆ, ಕಾಂಗ್ರೆಸ್ಸಿನವರು ಒಪ್ಪದಿದ್ದಾಗ ವಾಗ್ವಾದ ನಡೆಯಿತು.

ಅಂತಿಮವಾಗಿ ಮನವೊಲಿಕೆ ವಿಫಲವಾದ ನಂತರ ಪೊಲೀಸ್ ಬಸ್ಸುಗಳಲ್ಲಿ ಕರೆದೊಯ್ದು ಬಿಡುಗಡೆ ಮಾಡಿದರು. ಮಾಜಿ ಮೇಯರ್ ಪ್ರಕಾಶ ಕ್ಯಾರಕಟ್ಟಿ, ಮಹಾಂತೇಶ ಕುಲಕರ್ಣಿ, ಆರೀಫ್ ಭದ್ರಾಪುರ, ಸಂದೀಲ್ ಕುಮಾರ್, ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ, ಶರೀಫ್ ಗರಗದ, ಗೋಪಾಲ್, ಕಾಂಗ್ರೆಸ್ ಮಹಿಳಾ ಜಿಲ್ಲಾಧ್ಯಕ್ಷೆ ದೀಪಾ ಗೌರಿ ಸೇರಿ ಹಲವರು ಭಾಗಿಯಾಗಿದ್ದರು.

Related posts

ಕುರಿಗಾಹಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದವರನ್ನು ಗಲ್ಲು ಹಾಕಿ ಎಂದು ಆಗ್ರಹ

eNEWS LAND Team

EXTENSION OF PERIODICITY OF SPECIAL TRAINS ಸಾಪ್ತಾಹಿಕ ವಿಶೇಷ ರೈಲುಗಳ ಸೇವೆ ವಿಸ್ತರಣೆ

eNEWS LAND Team

ಧರ್ಮದ  ಮಾನವೀಯ ಮೌಲ್ಯಗಳೇ ಸಮಾಜಕ್ಕೆ ಪೂರಕ: ಬಸವಲಿಂಗ ಶ್ರೀಗಳು

eNEWS LAND Team