ಇಎನ್ಎಲ್ ಧಾರವಾಡ:
ಅರಣ್ಯ ಇಲಾಖೆಯಲ್ಲಿ ಕರ್ತವ್ಯದಲ್ಲಿದ್ದಾಗಲೆ ಮೃತಪಟ್ಟವರ ಗ್ರ್ಯಾಚೂಟಿ ಹಾಗೂ ವೇತನ ಬಿಡುಗಡೆಗೆ ಲಂಚದ ಬೇಡಿಕೆ ಇಟ್ಟಿದ್ದ ವಲಯ ಅರಣ್ಯ ಅಧಿಕಾರಿ ಕಚೇರಿಯ ಇಬ್ಬರು ಸಿಬ್ಬಂದಿ ಎಸಿಬಿ ಬಲೆಗೆ ರೆಡ್ಹ್ಯಾಾಂಡಾಗಿ ಸಿಕ್ಕಿಬಿದ್ದಿದ್ದಾರೆ.
ಹೊರಗುತ್ತಿಗೆ ಕಂಪ್ಯೂಟರ್ ಆಪರೇಟರ್ ಶಿವರಾಜ ಕಲ್ಲಪ್ಪ ಕುಲಕರ್ಣಿ ಹಾಗೂ ದ್ವಿತೀಯ ದರ್ಜೆ ಸಹಾಯಕ ಅನ್ನದಾನಯ್ಯ ನೀಲಗುಂದಮಠ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದವರು.
ಇಲಾಖೆಯಲ್ಲಿ ಕ್ಷೇಮಾಭಿವೃದ್ಧಿ ನೌಕರರಾಗಿ ಕೆಲಸ ಮಾಡುತ್ತಿದ್ದ ಅಖಳಂಡಪ್ಪ ಚಕ್ರಸಾಲಿ ಕರ್ತವ್ಯದಲ್ಲಿದ್ದಾಗ ಮೃತಪಟ್ಟಿದ್ದರು. ಅವರ ಗ್ರ್ಯಾಚೂಟಿ ಹಾಗೂ ಮೂರು ತಿಂಗಳ ಬಾಕಿ ವೇತನ ಬಿಡುಗಡೆಗೆ ₹ 15ಸಾವಿರ ಬೇಡಿಕೆ ಇಟ್ಟಿದ್ದರು.
ಎಸಿಬಿ ಉತ್ತರ ವಲಯ ಪೊಲೀಸ್ ಅಧೀಕ್ಷಕ ಬಿ.ಎಸ್.ನೇಮಗೌಡ ಮಾರ್ಗದರ್ಶನದಲ್ಲಿ ಪಿಐ ವಿ.ಎನ್.ಕಡಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರಿದಿದೆ.