25.4 C
Hubli
ಏಪ್ರಿಲ್ 26, 2024
eNews Land
ಸುದ್ದಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಹಾರ ದಾಸ್ತಾನು ಉಗ್ರಾಣಕ್ಕೆ ಡಿಸಿ ದಿಢೀರ್ ಭೇಟಿ

ಇಎನ್ಎಲ್ ಧಾರವಾಡ:

ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಇಂದು ಮಧ್ಯಾಹ್ನ ಧಾರವಾಡ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಹಾಗೂ ಗರ್ಭಿಣಿ, ಬಾಣಂತಿಯರಿಗೆ ವಿತರಿಸುವ ಆಹಾರ ಸಾಮಗ್ರಿ ದಾಸ್ತಾನು ಕೇಂದ್ರಕ್ಕೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು. ಪ್ರತಿ ಆಹಾರ ಸಾಮಗ್ರಿಗಳ ಸ್ಯಾಂಪಲ್‍ಗಳನ್ನು ಸ್ವತಃ ತೂಕ ಮಾಡಿ, ಸರಿಯಾದ ಪ್ರಮಾಣದಲ್ಲಿ ಆಹಾರ ಸಾಮಗ್ರಿಗಳು ಪ್ಯಾಕ್ ಆಗಿರುವ ಕುರಿತು ಖಾತರಿಪಡಿಸಿಕೊಂಡರು.

ಅಧಿಕಾರಿಗಳಿಗೆ ಆಹಾರ ಸಾಮಗ್ರಿಗಳ ಪ್ರಮಾಣ, ವಿತರಣೆ ಪ್ರಮಾಣ, ಆಹಾರ ಸಾಮಗ್ರಿಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ಹಾಗೂ ಜನಜಾಗೃತಿ ಮೂಡಿಸುವ ಕುರಿತು ನಿರ್ದೇಶನಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಡಾ.ಎಚ್.ಎಚ್. ಕುಕನೂರ, ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ಡಾ. ಕಮಲಾ ಬೈಲೂರ ಇದ್ದರು.

Related posts

ಇಂದಿನಿಂದ ಉಚಿತ ವಿದ್ಯುತ್‌ಗೆ ಅರ್ಜಿ ‘ಗೃಹಜ್ಯೋತಿ’ ಯೋಜನೆ ಅರ್ಜಿ ಸ್ವೀಕಾರ ಆರಂಭ… ಅರ್ಜಿ ಹಾಕುವುದು ಹೇಗೆ ನೋಡಿ

eNEWS LAND Team

ಧಾರವಾಡ: ಜಿಲ್ಲೆಯ ವಿವಿಧ ವಿಧಾನಸಭಾ ಮತಕ್ಷೇತ್ರಗಳಿಗೆ ಕೊನೆಯ ದಿನ ಏ.20 ರವರೆಗೆ ಒಟ್ಟು 182 ನಾಮಪತ್ರ ಸಲ್ಲಿಕೆ: ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ

eNewsLand Team

ಅಣ್ಣಿಗೇರಿ ಹಾಗೂ ನವಲಗುಂದ ಅಭಿವೃದ್ಧಿಗೆ ಕೋಟಿ ಗಟ್ಟಲೆ ಹರಿದು ಬಂದ ಅನುದಾನ

eNEWS LAND Team