34 C
Hubli
ಮಾರ್ಚ್ 23, 2023
eNews Land
ಸುದ್ದಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಹಾರ ದಾಸ್ತಾನು ಉಗ್ರಾಣಕ್ಕೆ ಡಿಸಿ ದಿಢೀರ್ ಭೇಟಿ

Listen to this article

ಇಎನ್ಎಲ್ ಧಾರವಾಡ:

ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಇಂದು ಮಧ್ಯಾಹ್ನ ಧಾರವಾಡ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಹಾಗೂ ಗರ್ಭಿಣಿ, ಬಾಣಂತಿಯರಿಗೆ ವಿತರಿಸುವ ಆಹಾರ ಸಾಮಗ್ರಿ ದಾಸ್ತಾನು ಕೇಂದ್ರಕ್ಕೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು. ಪ್ರತಿ ಆಹಾರ ಸಾಮಗ್ರಿಗಳ ಸ್ಯಾಂಪಲ್‍ಗಳನ್ನು ಸ್ವತಃ ತೂಕ ಮಾಡಿ, ಸರಿಯಾದ ಪ್ರಮಾಣದಲ್ಲಿ ಆಹಾರ ಸಾಮಗ್ರಿಗಳು ಪ್ಯಾಕ್ ಆಗಿರುವ ಕುರಿತು ಖಾತರಿಪಡಿಸಿಕೊಂಡರು.

ಅಧಿಕಾರಿಗಳಿಗೆ ಆಹಾರ ಸಾಮಗ್ರಿಗಳ ಪ್ರಮಾಣ, ವಿತರಣೆ ಪ್ರಮಾಣ, ಆಹಾರ ಸಾಮಗ್ರಿಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ಹಾಗೂ ಜನಜಾಗೃತಿ ಮೂಡಿಸುವ ಕುರಿತು ನಿರ್ದೇಶನಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಡಾ.ಎಚ್.ಎಚ್. ಕುಕನೂರ, ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ಡಾ. ಕಮಲಾ ಬೈಲೂರ ಇದ್ದರು.

Related posts

ಹುಬ್ಬಳ್ಳಿಯ ಐತಿಹಾಸಿಕ ಚಂದ್ರಮೌಳೇಶ್ವರ‌ ದೇವಸ್ಥಾನ ಇನ್ನಾದ್ರೂ ಅಭಿವೃದ್ಧಿ ಆಗತ್ತಾ?

eNewsLand Team

ರೈತರ ಆರ್ಥಿಕ ಶಕ್ತಿ ಹೆಚ್ಚಳಕ್ಕೆ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪನೆ: ಸಿಎಂ

eNewsLand Team

ರಾಷ್ಟ್ರೀಯ ಯುವಜನ ಉತ್ಸವದ ಲೋಗೋ ಮತ್ತು ಮ್ಯಾಸ್ಕಾಟ್ ಬಿಡುಗಡೆ

eNewsLand Team