ಇಎನ್ಎಲ್ ಬೆಂಗಳೂರು :
ಬೆಂಗಳೂರಿನ ಡಾ.ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೂನಿವರ್ಸಿಟಿಯ ನೂತನ ಕ್ಯಾಂಪಸ್ ಉದ್ಘಾಟನೆಗೆ ಡಿಸೆಂಬರ್ 6 ರಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮದ ಪೂರ್ವ ತಯಾರಿ ಕುರಿತು ಸಿಎಂ ಬೊಮ್ಮಾಯಿ, ಸಚಿವರು ಮತ್ತು ಅಧಿಕಾರಿಗಳ ಜತೆ ಬುಧವಾರ ಸಭೆ ನಡೆಸಿದರು. ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ, ವಿ.ಸೋಮಣ್ಣ, ಮುನಿರತ್ನ, ಅಧಿಕಾರಿಗಳಾದ ಕುಮಾರ್ ನಾಯಕ್, ಗೌರವ ಗುಪ್ತ , ಸೆಲ್ವಕುಮಾರ್, ಪಿ.ಪ್ರದೀಪ್, ವಿಶ್ವವಿದ್ಯಾಲಯದ ಕುಲಪತಿ ಡಾ.ಭಾನುಮೂರ್ತಿ ಇದ್ದರು.