26 C
Hubli
ಏಪ್ರಿಲ್ 20, 2024
eNews Land
ಜಿಲ್ಲೆ ಸುದ್ದಿ

ಧಾರವಾಡದಲ್ಲಿ ಅತಿವೃಷ್ಠಿಗೆ 9579 ಹೆಕ್ಟೇರ್ ಬೆಳೆ ನಾಶ

ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮಾಹಿತಿ

ಇಎನ್ಎಲ್ ಹುಬ್ಬಳ್ಳಿ

ಧಾರವಾಡ ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ 7329 ಹೆಕ್ಟರ್ ಕೃಷಿ ಬೆಳೆ, 2250 ಹೆಕ್ಟೇರ್ ತೋಟಗಾರಿಕೆ ಬೆಳೆ, ಒಟ್ಟು 9579 ಹೆಕ್ಟರ್ ಬೆಳೆ ನಾಶವಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದರು.

ಹುಬ್ಬಳ್ಳಿ ಸವಾಯಿ ಗಂಧರ್ವ ಹಾಲ್‌ನಲ್ಲಿ ಅತಿವೃಷ್ಠಿ ಕುರಿತಾಗಿ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.

ಪ್ರಾಥಮಿಕ ಮಾಹಿತಿಯಂತೆ‌ ಭತ್ತ,‌ ಕಡಲೆ, ಮೆಣಸಿಕಾಯಿ ಬೆಳೆಗೆ ಹಾನಿಯಾಗಿದೆ. 28 ಕಿ.ಮೀ. ಲೋಕೋಪಯೋಗಿ ರಸ್ತೆ ಹಾಳಾಗಿದೆ. 22 ಮನೆಗಳು ಸಂಪೂರ್ಣವಾಗಿ ಬಿದ್ದಿವೆ. 188 ಮನೆಗಳು ಭಾಗಶಃ ಹಾನಿಗೆ ಒಳಗಾಗಿವೆ.

 

ನವೆಂಬರ್ 30 ವರೆಗೆ ಹಾನಿಗಿಳಗಾದ ಮನೆ ಹಾಗೂ ಬೆಳೆ ಪರಿಹಾರದ ಮಾಹಿತಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಗತ್ಯ ಬಿದ್ದರ ಕಾಳಜಿ ಕೇಂದ್ರಗಳನ್ನು ತೆರಯಲಾಗುವುದು.

ಹಾನಿಗೆ ಒಳಗಾದ ಮನೆಗಳ ಮಾಲಿಕರಿಗೆ ತಕ್ಷಣಕ್ಕೆ 10 ಸಾವಿರ ಪರಿಹಾರ ನೀಡಲಾಗುವುದು. ಬೆಳೆ ವಿಮೆ ಪರಿಹಾರ ನೀಡುವ ಕಂಪನಿಯವರು ರೈತ ಸಂಪರ್ಕ ಕೇಂದ್ರದಲ್ಲಿದ್ದು ರೈತರಿಂದ ಮಾಹಿತಿ ಪಡೆದುಕೊಳ್ಳುವಂತೆ ಸೂಚನೆ ನೀಡಿದ್ದೇನೆ. ಇನ್ನೂ ಮೂರು ನಾಲ್ಕು ದಿನಗಳು ಮಳೆ ಮುಂದುವರಿಯಲಿದೆ. ಸದ್ಯ ಶಾಲೆಗಳಿಗೆ ಸೋಮವಾರದವರೆಗೆ ರಜೆ ಇದ್ದು, ಪರಿಸ್ಥಿತಿ ಅವಲೋಕಿಸಿ‌ ಶಾಲೆಗೆ ರಜೆ ನೀಡುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದರು.

Related posts

ಅಣ್ಣಿಗೇರಿಯಲ್ಲಿ ಸಂಭ್ರಮದ ಹೋಳಿ ಹಬ್ಬ

eNEWS LAND Team

ಪಠ್ಯದ ಜೊತೆಗೆ ಪಠ್ಯೇತರ ಚಟುವಟಕೆ ಅವಶ್ಯ: ಡಾ.ಮೋತಿಲಾಲ್ ರಾಠೋಡ

eNewsLand Team

ಮಳೆ ಲೆಕ್ಕಿಸದೇ ಕೇಂದ್ರ ತಂಡ ಭೇಟಿ: ಚೆನ್ನಾಗಿ ಕೆಲಸ ಮಾಡಿದ್ದೀರಿ: ಅಂಕಿತ್ ಮಿಶ್ರಾ

eNEWS LAND Team