34 C
Hubli
ಮಾರ್ಚ್ 23, 2023
eNews Land
ಸುದ್ದಿ

ಆಸ್ಪತ್ರೆಗೆ ಮಗು ತೋರಿಸಲು ಬಂದ ದಂಪತಿ ಅಪಘಾತದಲ್ಲಿ ಸಾವು, ಮಗು ಸ್ಥಿತಿ ಹೇಗಿದೆ?

Listen to this article

ಇಎನ್ಎಲ್ ಧಾರವಾಡ

ರಾಷ್ಟ್ರೀಯ ಹೆದ್ದಾರಿ ಹುಬ್ಬಳ್ಳಿ ಸೊಲ್ಲಾಪುರ ರಸ್ತೆಯಲ್ಲಿ ಸಂಭವಿಸಿದ ಟಿಪ್ಪರ್-ಬೈಕ್‌ ನಡುವಿನ ಅಪಘಾತದಲ್ಲಿ ಮಗುವನ್ನು ಆಸ್ಪತ್ರೆಗೆ ಕರೆತಂದಿದ್ದ ದಂಪತಿ ಮೃತಪಟ್ಟ ಧಾರುಣ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ತಾಲೂಕಿನ ಬೆಳವಟಗಿ ಗ್ರಾಮದ ಸುಷ್ಮಾ ಆನಂದ್ ಸಿದ್ದಗಿರಿ (32) ಆನಂದ್ ನೀಲಪ್ಪ ಸಿದ್ದಗಿರಿ(36) ಮೃತಪಟ್ಟ ದುರ್ದೈವಿ ದಂಪತಿ.
ಇಬ್ಬರು ತಮ್ಮ ಮೂರು ವರ್ಷದ ಮಗುವನ್ನು ಆಸ್ಪತ್ರೆಗೆ ತೋರಿಸಲು ಬರುತ್ತಿದ್ದ ವೇಳೆ ಟಿಪ್ಪರ್ ಚಾಲಕ ಕುಡಿದ ಅಮಲಿನಲ್ಲಿ ಬೈಕಿಗೆ ಡಿಕ್ಕಿ ಹೊಡೆದಿದ್ದಾನೆ.

 

ಅಲ್ಲದೇ ಮುಂದೆ ಹೋಗಿ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ಇನ್ನೊಂದು ಬೈಕ್ ಸವಾರನಿಗೂ ಅಪಘಾತ ಆಗಿದೆ. ಟಿಪ್ಪರ್ ಚಾಲಕ ಟಿಪ್ಪರ್ ಬಿಟ್ಟು ಪರಾರಿಯಾಗಿದ್ದಾನೆ.
ಅಪಘಾತದಲ್ಲಿ ದಂಪತಿಗಳ ಮಗು ಪವಾಡ ಸದೃಶ ರೀತಿಯಲ್ಲಿ ಪಾರಾಗಿದೆ. ಇನ್ನು ಘಟನಾ ಸ್ಥಳಕ್ಕೆ ನವಲಗುಂದ ಪೊಲೀಸರು ಕ್ಷಣಾರ್ಧದಲ್ಲಿ ಭೇಟಿ ನೀಡಿ ಸುಷ್ಮಾಳನ್ನು ರಕ್ಷಿಸಲು ಪ್ರಯತ್ನಿಸಿದರು ಆದರೆ ಚಿಕಿತ್ಸೆ ನೀಡುವ ಮುನ್ನವೇ ಮೃತಪಟ್ಟಿದ್ದರು. ಮಗು ಹಾಗೂ ಇನ್ನೊಬ್ಬ ಬೈಕ್‌ಸವಾರ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಉಕ್ರೇನ್ ಮೇಲೆ ಯುದ್ಧ ಆರಂಭಿಸಿದ ರಷ್ಯಾ; ಜಗತ್ತಿನಲ್ಲಿ ತಲ್ಲಣ

eNewsLand Team

ಗರ್ಭಿಣಿ‌ ಪತ್ನಿಯ ಪತಿ ಮರ್ಡರ್; ನಡೆದಿದೆ ತನಿಖೆ

eNewsLand Team

ಧಾರವಾಡ ಜಿಲ್ಲೆಯ ನಾಲ್ಕು ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಶೇ.100 ರಷ್ಟು ಕೋವಿಡ್ ಮೊದಲ ಡೋಸ್ ಲಸಿಕೆ

eNEWS LAND Team