ಇಎನ್ಎಲ್ ಧಾರವಾಡ: ಕಾರಿನ ಎಂಜಿನನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಇಲ್ಲಿನ ಹೊರವಲಯದ ಗಬ್ಬೂರಿನ ಆರ್ ಟಿ ಓ ಕಚೇರಿಯ ಬಳಿ ನಡೆದಿದೆ.
ಚವರ್ಲೇಟ್ ತವೇರಾ ಕಾರು ಬೆಂಕಿಗೆ ಆಹುತಿ ಆಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಲೇ ಬೆಂಕಿ ತಲುಲಿದೆ ಎಂಬ ಮಾಹಿತಿ ತಿಳಿದುಬಂದಿದೆ. ಇನ್ನೂ ಕಾರಿನ ಚಾಲಕ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಿಂದ ಜಿಗಿದಿದ್ದಾನೆಂದು ಹೇಳಲಾಗುತ್ತಿದೆ. ಹುಬ್ಬಳ್ಳಿಯಿಂದ ಹೊರಟ್ಟಿದ್ದ ಕಾರು ಇದಾಗಿದ್ದು, ಸದ್ಯ ಕಾರು ಯಾರಿಗೆ ಸೇರಿದ್ದು, ಎಲ್ಲಿಗೆ ಹೊರಟಿದ್ದರು ಎಂಬ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಬೆಂಡಿಗೇರಿ ಪೋಲಿಸ ಠಾಣೆಯ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.