24 C
Hubli
ಸೆಪ್ಟೆಂಬರ್ 27, 2023
eNews Land
ಸುದ್ದಿ

ರಾಜ್ಯದ 3026 ಗ್ರಾಮ ಪಂಚಾಯಿತಿಗಳಲ್ಲಿ ಆರಂಭ

ಮಾರ್ಚ್ ಅಂತ್ಯದೊಳಗೆ ರಾಜ್ಯಾದ್ಯಂತ ವಿಸ್ತರಣೆ

ಇಎನ್ಎಲ್ ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಗ್ರಾಮ ಒನ್ ಯೋಜನೆ  ರಾಜ್ಯದ 3026 ಗ್ರಾಮ ಪಂಚಾಯಿತಿಗಳಲ್ಲಿ ಆರಂಭವಾಗಿದೆ. ಮಾರ್ಚ್ ಇರುವುದು ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡುವ ಗುರಿ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಹತ್ವಾಕಾಂಕ್ಷೆಯ ಗ್ರಾಮ ಒನ್ ಯೋಜನೆ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರದ ಸೌಲಭ್ಯ ಪಡೆಯಲು ಜನರು ಸಮಯ ಹಾಗೂ ಹಣ ವ್ಯಯಿಸುವುದನ್ನು ತಪ್ಪಿಸಿ, ಗ್ರಾಮೀಣ ಜನರ ಬಳಿಯೇ ಸೇವೆ ತಲುಪಿಸುವ ಧ್ಯೇಯದೊಂದಿಗೆ ಗ್ರಾಮ ಒನ್ ಕಾರ್ಯಕ್ರಮ ರೂಪಿಸಲಾಗಿದೆ.

ಕೃಷಿ, ತೋಟಗಾರಿಕೆ, ಕಂದಾಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಸೇರಿದಂತೆ ಹಲವಾರು ಸೇವೆಗಳು ಗ್ರಾಮ ಮಟ್ಟದಲ್ಲಿ ಲಭ್ಯವಾಗಿಸುವ ಚಿಂತನೆಯಿಂದ ಗ್ರಾಮ ಒನ್ ಪ್ರಾರಂಭಿಸಲಾಗಿದೆ. ತಾಲೂಕು ಕಚೇರಿಯಲ್ಲಿ ಸೇವೆಗಳಿಗಾಗಿ ಜನಸಂದಣಿ ತಪ್ಪಿಸಲು ಹಾಗೂ ಸೇವೆಗಳ ಪೂರೈಕೆಯಲ್ಲಿ ವಿಕೇಂದ್ರೀಕರಣದ ಉದ್ದೇಶದಿಂದ, ಗ್ರಾಮಮಟ್ಟದಲ್ಲಿಯೂ ಈ ಎಲ್ಲ ಸೇವೆ ಒದಗಿಸಲಾಗುವುದು. ಗ್ರಾಮಸ್ಥರು ನೇರವಾಗಿ ಗ್ರಾಮ ಪಂಚಾಯತಿಗೆ ತೆರಳಿ ಗ್ರಾಮ ಒನ್ ಸೇವೆ ಪಡೆಯಬಹುದಾಗಿದೆ ಎಂದು ತಿಳಿಸಿದರು.

ಉತ್ತಮ ಸಲಕರಣೆ ,ಸಮರ್ಥ ಹಾಗೂ ಸದೃಢ ತಂತ್ರಜ್ಞಾನದಿಂದ ಯಾವುದೇ ಅಡಚಣೆಗಳಿಲ್ಲದೆ ಗ್ರಾಮೀಣ ಜನರಿಗೆ ಸೇವೆ ಒದಗಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. 12 ಜಿಲ್ಲೆಗಳ 3026 ಗ್ರಾಮ ಪಂಚಾಯತಿಗಳಲ್ಲಿ ಈ ಸೇವೆ ಪ್ರಾರಂಭಿಸಲಾಗಿದ್ದು, ಈ ಹಿಂದೆ 4 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಿ, ಅನುಷ್ಠಾನದಲ್ಲಿನ ಎಲ್ಲ ತೊಡಕು ನಿವಾರಿಸಲಾಗಿದೆ. ಜನರಿಗೆ ಸರ್ಕಾರದ ಸೇವೆಗಳನ್ನು ತಲುಪಿಸುವ ಕ್ರಾಂತಿಕಾರಿ ಬದಲಾವಣೆ ಇದಾಗಿದೆ. ತಳಮಟ್ಟದಲ್ಲಿ ಸರ್ಕಾರದ ಸೇವೆ ಸಮರ್ಪಕವಾಗಿ ಸುಲಭವಾಗಿ ತಲುಪಿಸಲಾಗುವುದು. ಈ ವ್ಯವಸ್ಥೆಯ ಮೂಲಕ ಸರ್ಕಾರದ ಕಾರ್ಯನಿರ್ವಹಣೆಯ ಮೇಲಿನ ಜನರ ವಿಶ್ವಾಸವನ್ನು ಪುನರ್ ಸ್ಥಾಪಿಸುವ ಚಿಂತನೆ ಇದೆ ಎಂದು ತಿಳಿಸಿದರು.

ಗ್ರಾಮ ಒನ್ – ದಕ್ಷ ವ್ಯವಸ್ಥೆಯಾಗಿಸಲು ಸೂಚನೆ:
ಮನೆ ಹೊಲ ಹಕ್ಕು ಪತ್ರಗಳು, ಸಂಧ್ಯಾ ಸುರಕ್ಷಾ, ಅಂಗವಿಕಲರ ಮಾಸಾಶನ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಹೀಗೆ ಜನರ ಹತ್ತಾರು ಸೇವೆಗಳ ಅವಶ್ಯಕತೆ ಪೂರೈಸುವ ಪ್ರಯತ್ನವಾಗಿದೆ. ಪ್ರಮುಖ ಸೇವೆಗಳಿಗೆ ಸೀಮಿತಗೊಳಿಸಿ ಅತ್ಯಂತ ದಕ್ಷ ವ್ಯವಸ್ಥೆಯನ್ನಾಗಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಈ ವ್ಯವಸ್ಥೆ ನಿರಂತರವಾಗಿ ಸುಧಾರಿಸುವ ಮೂಲಕ ಜನರಿಗೆ ಸಮರ್ಪಕವಾಗಿ ಸೇವೆ ಒದಗಿಸಲಾಗುವುದು ಎಂದರು.

Related posts

ರಾಡಿಹಳ್ಳ ಹೋರಾಟ ಸಮಿತಿಯಿಂದ ಪ್ರವಾಹದ ಸಮಸ್ಯೆಗೆ ಆಗ್ರಹ

eNEWS LAND Team

ರಸ್ತೆ ಸುಧಾರಣೆ ಮತ್ತು ಡಾಂಬರೀಕರಣ ಕಾಮಗಾರಿ ಭೂಮಿಪೂಜೆ: ಸಚಿವ ಜೋಶಿ

eNEWS LAND Team

ಪ್ರಜ್ಞಾವಂತರ ಚುನಾವಣೆ ಉತ್ತಮ ಅಭ್ಯರ್ಥಿ ಆಯ್ಕೆ ಮಾಡಿ: ಶಾಸಕಿ ಕುಸುಮಾವತಿ

eNEWS LAND Team