23 C
Hubli
ಸೆಪ್ಟೆಂಬರ್ 25, 2023
eNews Land
ಸುದ್ದಿ

ಇಂಚಲ-ಮರಕುಂಬಿ ರಸ್ತೆ ನಿರ್ಮಾಣಕ್ಕೆ ಪ್ರಸ್ತಾವನೆ: ಸಚಿವ ಕೆ.ಎಸ್.ಈಶ್ವರಪ್ಪ

ಇಎನ್ಎಲ್ ಬೆಳಗಾವಿ ಸುವರ್ಣ ಸೌಧ:

ಬೈಲಹೊಂಗಲ ಮತಕ್ಷೇತ್ರದ ವ್ಯಾಪ್ತಿಗೆ ಬರುವ ಸವದತ್ತಿ ತಾಲೂಕಿನ ಇಂಚಲ-ಮರಕುಂಬಿ 5 ಕಿ.ಮೀ. ಗ್ರಾಮೀಣ ರಸ್ತೆಯನ್ನು 1.65 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಕಂದಾಯ ಮತ್ತು ಆರ್ಥಿಕ ಇಲಾಖೆಗೆ ಪ್ರಸ್ತಾವಣೆ ಸಲ್ಲಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಹೇಳಿದರು.
ವಿಧಾನ ಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಇಂದು ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ ಅವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. ಬೆಳಗಾವಿ ಜಿಲ್ಲೆ ಬೈಲಹೊಂಗಲದ ಮತಕ್ಷೇತ್ರದ ಸವದತ್ತಿ ತಾಲೂಕಿನ ಇಂಚಲ-ಮರಕುಂಬಿ 5 ಕಿ.ಮಿ. ರಸ್ತೆಯು ಮಳೆಯಿಂದ ಹಾಳಾಗಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿರುವದು ಸರಕಾರದ ಗಮನಕ್ಕೆ ಬಂದಿದ್ದು ಈ ರಸ್ತೆಯನ್ನು ಅಭಿವೃದ್ಧಿಪಡಿಸಲು ಸುಮಾರು 1.65 ಕೋಟಿ ರೂ. ಅನುದಾನದ ಅವಶ್ಯಕತೆವಿರುತ್ತದೆ. 2020-21ನೇ ಸಾಲಿನಲ್ಲಿ ಲಿಂಕ್ ಡಾಕ್ಯೂಮೆಂಟರಡಿ 3 ಲಕ್ಷ ರೂ.ಗಳ ಮೊತ್ತದಲ್ಲಿ ಮೇಲಿನ ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿಪಡಿಸಲಾಗಿದೆ. ಅಲ್ಲದೇ ಈ ಇಂಚಲ-ಮರಕುಂಬಿ ರಸ್ತೆ ಒಳಗೊಂಡಂತೆ ಮಳೆಯಿಂದ ಹಾನಿಗೊಳಗಾಗಿರುವ ರಸ್ತೆ ಮತ್ತು ಸೇತುವೆಗಳ ದುರಸ್ತಿಗೆ ಅನುದಾನವನ್ನು ಒದಗಿಸುವಂತೆ ಕಂದಾಯ ಮತ್ತು ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು ಅನುದಾನ ಲಭ್ಯವಾದ ನಂತರ ಕಾಮಗಾರಿಯನ್ನು ಕೈಗೊಳ್ಳಲಾಗುವದು ಎಂದು ತಿಳಿಸಿದರು.

Related posts

ಡಿ.3 ರಿಂದ ಎಸ್‌ಡಿಎಂ  ಹೊರ ಮತ್ತು ಒಳ ರೋಗಿಗಳ ವಿಭಾಗ ಸೇವೆಗಳ ಪುನರಾರಂಭಕ್ಕೆ ಷರತ್ತುಬದ್ಧ ಅನುಮತಿ: ಡಿಸಿ ನಿತೇಶ್ ಪಾಟೀಲ

eNEWS LAND Team

ಉತ್ತಮ ಸೇವೆ : ಟಿ.ಭೂಬಾಲನ್‍ಗೆ ರಾಷ್ಟ್ರೀಯ ಮನ್ನಣೆ

eNEWS LAND Team

ಸಾಲಬಾಧೆ; ಹುಬ್ಬಳ್ಳಿ ರೈತ ಆತ್ಮಹತ್ಯೆ

eNewsLand Team