25.4 C
Hubli
ಏಪ್ರಿಲ್ 26, 2024
eNews Land
ಸುದ್ದಿ

ಹೆಲಿಕಾಪ್ಟರ್ ಪತನ; ಸೇನಾ ಪಡೆಗಳ ಮುಖ್ಯಸ್ಥ (ಸಿಡಿಎಸ್‌) ಬಿಪಿನ್‌ ರಾವತ್‌ ನಿಧನ

ಇಎನ್ಎಲ್ ಡೆಸ್ಕ್
ನವದೆಹಲಿ: ತಮಿಳುನಾಡಿನ ಕೂನೂರಿನ ಸಮೀಪ ಪತನಗೊಂಡ ಸೇನಾ ಹೆಲಿಕಾಪ್ಟರನಲ್ಲಿ ಪ್ರಯಾಣಿಸುತ್ತಿದ್ದ ಸೇನಾ ಪಡೆಗಳ ಮುಖ್ಯಸ್ಥ (ಸಿಡಿಎಸ್‌) ಬಿಪಿನ್‌ ರಾವತ್‌ ಅವರು   ಮೃತಪಟ್ಟಿದ್ದಾರೆ ಎಂದು ಸೇನಾ ಮೂಲಗಳು ದೃಢಪಡಿಸಿವೆ.

ಅವರು ಪ್ರಯಾಣಿಸುತ್ತಿದ್ದ ವಾಯುಪಡೆಯ ಎಂಐ–17ವಿ5 ಹೆಲಿಕಾಪ್ಟರ್‌ ಬುಧವಾರಲ ತಮಿಳುನಾಡಿನ ಕೂನೂರಿನ ಸಮೀಪ ಪತನಗೊಂಡಿತ್ತು. ಈ ವೇಳೆ ಹೆಲಿಕಾಪ್ಟರ್‌ನಲ್ಲಿದ್ದ ರಾವತ್‌ ಸೇರಿ 12 ಮಂದಿ ಸಾವಿಗೀಡಾಗಿದ್ದಾರೆ ಎಂದು ಭಾರತೀಯ ವಾಯುಪಡೆ ದೃಢಪಡಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಭಾರತೀಯ ವಾಯುಪಡೆ, ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಇತರೆ 12 ಜನರು ಹೆಲಿಕಾಪ್ಟರ್ ಪತನದಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಿದೆ.

ಕೊಯಮತ್ತೂರು ಜಿಲ್ಲೆಯ ವೆಲಿಂಗ್ಟನ್‌ನಲ್ಲಿ ಉಪನ್ಯಾಸ ನೀಡಲು ಹೊರಟಿದ್ದ ರಾವತ್ ಹೊರಟಿದ್ದರು, ಈ ವೇಳೆ ಅವಘಡ ಸಂಭವಿಸಿದೆ.

Related posts

ರೈತರ ಸಮಸ್ಯೆ ನೀಗಿಸಲು ಒಂದಾಗೋಣ: ಸಿಎಂ ಕರೆ

eNewsLand Team

ತಂದೆ-ತಾಯಿ ಜೀವಂತ ದೇವರು ಪೂಜ್ಯತೆಯಿಂದ ಕಾಣಿರಿ : ಬಸವಲಿಂಗಸ್ವಾಮಿ

eNEWS LAND Team

ಉಕ್ರೇನ್ ಮೇಲೆ ಯುದ್ಧ ಆರಂಭಿಸಿದ ರಷ್ಯಾ; ಜಗತ್ತಿನಲ್ಲಿ ತಲ್ಲಣ

eNewsLand Team