ಸಾಲ ಬಾಕಿ, ಆಡಳಿತಾತ್ಮಕ ವೈಫಲ್ಯ ಕಾರಣ
ಇಎನ್ಎಲ್ ಡೆಸ್ಕ್: ನಷ್ಟದಲ್ಲಿರುವ ರಿಲಯನ್ಸ್ ಕ್ಯಾಪಿಟಲ್ ಲಿಮಿಟೆಡ್ನ (ಆರ್ಸಿಎಲ್) ಆಡಳಿತ ಮಂಡಳಿಯನ್ನು ರದ್ದು ಮಾಡಿರುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಸೋಮವಾರ ತಿಳಿಸಿದೆ.
ಸಾಲ ಮರುಪಾವತಿಸದೇ ಇರುವುದು ಹಾಗೂ ಆಡಳಿತಾತ್ಮಕ ವಿಷಯಗಳಲ್ಲಿನ ವೈಫಲ್ಯದಿಂದಾಗಿ ಮಂಡಳಿಯ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಕಂಪನಿಯ ಆಡಳಿತಾಧಿಕಾರಿ ಆಗಿ ಬ್ಯಾಂಕ್ ಆಫ್ ಮಹಾರಾಷ್ಟ್ರದ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ನಾಗೇಶ್ವರ ರಾವ್ ಅವರನ್ನು ನೇಮಿಸಲಾಗಿದೆ ಎಂದು ತಿಳಿಸಿದೆ.