ಇಎನ್ಎಲ್ ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಇಲಾಖೆಯ ವತಿಯಿಂದ ಆಲಿ ಆಸ್ಕರ್ ರಸ್ತೆಯ ಸಹಕಾರ ಸಂಘಗಳ ನಿಬಂಧಕರ ಕಛೇರಿ ಆವರಣದಲ್ಲಿ ಆಯೋಜಿಸಿದ್ದ “ಸಹಕಾರ ಸಮೃದ್ಧಿ ಸೌಧ” ಕಟ್ಟಡದ ಗುದ್ದಲಿ ಪೂಜೆಯನ್ನು ಉದ್ಘಾಟಿಸಿ, ಕಟ್ಟಡದ ಶಿಲಾನ್ಯಾಸ ಕಾರ್ಯವನ್ನು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ, ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.
ಪಾಟೀಲ್, ಜವಳಿ, ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ವಸತಿ, ವಕ್ಫ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝಡ್.ಜಮೀರ್ ಅಹ್ಮದಖಾನ್ ಹಾಗೂ ಸಹಕಾರ ಇಲಾಖೆಯ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.