ಇಎನ್ಎಲ್ ಧಾರವಾಡ: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023 ನೇದ್ದಕ್ಕೆ ಸಂಬಂಧಿಸಿದಂತೆ, ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ, ಜಿಲ್ಲೆಯ ಏಳು ವಿಧಾನಸಭಾ ಮತಕ್ಷೇತ್ರಗಳಲ್ಲಿ ಅಂಚೆ ಮತದಾನದ ಮೂಲಕ ಮತದಾನ ಮಾಡಲು ಇಚ್ಛಿಸಿ, ನಮೂನೆ 12ಡಿ ರಲ್ಲಿ ಚುನಾವಣಾಧಿಕಾರಿಗಳಿಗೆ ಅರ್ಜಿಯನ್ನು ಸಲ್ಲಿಸಿದ ವಿಕಲಚೇತನ ಮತ್ತು 80+ ಮತದಾರರ ಮನೆಗಳಿಗೆ, ಮತಗಟ್ಟೆ ಅಧಿಕಾರಿಗಳು, ಸಿಬ್ಬಂದಿಗಳು ಏ.29, 30 ಹಾಗೂ ಮೇ 1 ರಂದು ಭೇಟಿ ನೀಡಿ ಅಂಚೆ ಮತಪತ್ರಗಳ ವಿತರಣೆ ಮತ್ತು ಸ್ವೀಕೃತಿ ಕಾರ್ಯವನ್ನು ಕೈಗೊಳ್ಳಲಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ
ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು
ಏ.29, 30 ಹಾಗೂ ಮೇ 1 ರ ಈ ಮೂರು ದಿವಸಗಳಂದು ನಮೂನೆ 12ಡಿ ದಲ್ಲಿ ಚುನಾವಣಾಧಿಕಾರಿಗಳಿಗೆ ಅರ್ಜಿಯನ್ನು ಸಲ್ಲಿಸಿದ ವಿಕಲಚೇತನ ಹಾಗೂ 80+ ಮತದಾರರು ತಮ್ಮ ವಾಸಸ್ಥಳದಲ್ಲಿ ಹಾಜರಿದ್ದು, ತಮ್ಮ ಮನೆಗೆ ಬರುವ ಮತಗಟ್ಟೆ ಅಧಿಕಾರಿಗಳು,ಸಿಬ್ಬಂದಿಗಳಿಗೆ ಸಹಕಾರ ನೀಡಬೇಕೆಂದು ಅವರು ತಿಳಿಸಿದ್ದಾರೆ